Andolana originals

ಓದುಗರ ಪತ್ರ:  ಪಟಾಕಿಗಳನ್ನು ಸಿಡಿಸುವಾಗ ಮುಂಜಾಗ್ರತೆ ವಹಿಸಿ

ದೀಪಾವಳಿ ಹಬ್ಬವನ್ನು ಸಂತೋಷದಿಂದ ಕಳೆಯಬೇಕೆಂದರೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯಲ್ಲಿ ಪಟಾಕಿಯನ್ನು ಗಾಳಿಯಾಡುವ ಜಾಗದಲ್ಲಿ ಇಡಬೇಕು. ಪಟಾಕಿ ಹೊಡೆಯುವ ಮುನ್ನ ಹತ್ತಿ ಬಟ್ಟೆ ಧರಿಸಬೇಕು. ಬಡಾವಣೆಯ ಜನರೆಲ್ಲ ದೊಡ್ಡ ಬಯಲಿನಲ್ಲಿ ಸೇರಿ ಮುಂಜಾಗ್ರತೆಯೊಡನೆ ಪಟಾಕಿ ಹೊಡೆದರೆ ಬಡಾವಣೆಯ ಜನರ ಸಂಪರ್ಕ ಬೆಳೆದು ಸ್ನೇಹ ಪ್ರೀತಿ ವಿಶ್ವಾಸ ಬೆಳೆಯುತ್ತದೆ.

ಮಕ್ಕಳಿಗೆ ಕಡಿಮೆ ಶಬ್ದ ಸಾಮರ್ಥ್ಯವಿರುವ ಪಟಾಕಿ ಕೊಡಿಸಬೇಕು, ಅವರು ಪಟಾಕಿ, ಸುರ್‌ಸುರ್ ಬತ್ತಿ ಹಚ್ಚುವಾಗ ಪೋಷಕರು ಮುಂದೆ ನಿಂತು ಎಚ್ಚರ ವಹಿಸಬೇಕು. ಲೈಟ್ ಕಂಬ ಹತ್ತಿರ ಪಟಾಕಿ ಹೊಡೆಯಬಾರದು, ಪಟಾಕಿ ಹೊಡೆಯುವಾಗ ಹತ್ತಿರದಲ್ಲಿ ಗ್ಯಾಸ್ ಸಿಲಿಂಡರ್, ಸ್ಕೂಟರ್ ಇರದ ಹಾಗೆ ನೋಡಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ಪಟಾಕಿಯಿಂದ ಅನಾಹುತಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಬಗ್ಗೆ ತಿಳಿಸಬೇಕು. ಪರಿಸರ ಸ್ನೇಹಿ ಪಟಾಕಿಯನ್ನು ಮಾತ್ರ ಹೊಡೆಯಬೇಕು. ಆಂಬ್ಯುಲೆನ್ಸ್, ವೈದ್ಯರು ಮೊದಲಾದ ತುರ್ತು ಸೇವಾ ದೂರವಾಣಿ ಸಂಖ್ಯೆಗಳನ್ನು ಇಟ್ಟುಕೊಂಡಿರಬೇಕು.

 -ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ , ಮೈಸೂರು

ಆಂದೋಲನ ಡೆಸ್ಕ್

Recent Posts

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

25 mins ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

26 mins ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

1 hour ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

1 hour ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

2 hours ago

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

3 hours ago