ಓದುಗರ ಪತ್ರ
ದೀಪಾವಳಿ ಹಬ್ಬವನ್ನು ಸಂತೋಷದಿಂದ ಕಳೆಯಬೇಕೆಂದರೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯಲ್ಲಿ ಪಟಾಕಿಯನ್ನು ಗಾಳಿಯಾಡುವ ಜಾಗದಲ್ಲಿ ಇಡಬೇಕು. ಪಟಾಕಿ ಹೊಡೆಯುವ ಮುನ್ನ ಹತ್ತಿ ಬಟ್ಟೆ ಧರಿಸಬೇಕು. ಬಡಾವಣೆಯ ಜನರೆಲ್ಲ ದೊಡ್ಡ ಬಯಲಿನಲ್ಲಿ ಸೇರಿ ಮುಂಜಾಗ್ರತೆಯೊಡನೆ ಪಟಾಕಿ ಹೊಡೆದರೆ ಬಡಾವಣೆಯ ಜನರ ಸಂಪರ್ಕ ಬೆಳೆದು ಸ್ನೇಹ ಪ್ರೀತಿ ವಿಶ್ವಾಸ ಬೆಳೆಯುತ್ತದೆ.
ಮಕ್ಕಳಿಗೆ ಕಡಿಮೆ ಶಬ್ದ ಸಾಮರ್ಥ್ಯವಿರುವ ಪಟಾಕಿ ಕೊಡಿಸಬೇಕು, ಅವರು ಪಟಾಕಿ, ಸುರ್ಸುರ್ ಬತ್ತಿ ಹಚ್ಚುವಾಗ ಪೋಷಕರು ಮುಂದೆ ನಿಂತು ಎಚ್ಚರ ವಹಿಸಬೇಕು. ಲೈಟ್ ಕಂಬ ಹತ್ತಿರ ಪಟಾಕಿ ಹೊಡೆಯಬಾರದು, ಪಟಾಕಿ ಹೊಡೆಯುವಾಗ ಹತ್ತಿರದಲ್ಲಿ ಗ್ಯಾಸ್ ಸಿಲಿಂಡರ್, ಸ್ಕೂಟರ್ ಇರದ ಹಾಗೆ ನೋಡಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ಪಟಾಕಿಯಿಂದ ಅನಾಹುತಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಬಗ್ಗೆ ತಿಳಿಸಬೇಕು. ಪರಿಸರ ಸ್ನೇಹಿ ಪಟಾಕಿಯನ್ನು ಮಾತ್ರ ಹೊಡೆಯಬೇಕು. ಆಂಬ್ಯುಲೆನ್ಸ್, ವೈದ್ಯರು ಮೊದಲಾದ ತುರ್ತು ಸೇವಾ ದೂರವಾಣಿ ಸಂಖ್ಯೆಗಳನ್ನು ಇಟ್ಟುಕೊಂಡಿರಬೇಕು.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ , ಮೈಸೂರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…