ಓದುಗರ ಪತ್ರ
ದೀಪಾವಳಿ ಹಬ್ಬವನ್ನು ಸಂತೋಷದಿಂದ ಕಳೆಯಬೇಕೆಂದರೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯಲ್ಲಿ ಪಟಾಕಿಯನ್ನು ಗಾಳಿಯಾಡುವ ಜಾಗದಲ್ಲಿ ಇಡಬೇಕು. ಪಟಾಕಿ ಹೊಡೆಯುವ ಮುನ್ನ ಹತ್ತಿ ಬಟ್ಟೆ ಧರಿಸಬೇಕು. ಬಡಾವಣೆಯ ಜನರೆಲ್ಲ ದೊಡ್ಡ ಬಯಲಿನಲ್ಲಿ ಸೇರಿ ಮುಂಜಾಗ್ರತೆಯೊಡನೆ ಪಟಾಕಿ ಹೊಡೆದರೆ ಬಡಾವಣೆಯ ಜನರ ಸಂಪರ್ಕ ಬೆಳೆದು ಸ್ನೇಹ ಪ್ರೀತಿ ವಿಶ್ವಾಸ ಬೆಳೆಯುತ್ತದೆ.
ಮಕ್ಕಳಿಗೆ ಕಡಿಮೆ ಶಬ್ದ ಸಾಮರ್ಥ್ಯವಿರುವ ಪಟಾಕಿ ಕೊಡಿಸಬೇಕು, ಅವರು ಪಟಾಕಿ, ಸುರ್ಸುರ್ ಬತ್ತಿ ಹಚ್ಚುವಾಗ ಪೋಷಕರು ಮುಂದೆ ನಿಂತು ಎಚ್ಚರ ವಹಿಸಬೇಕು. ಲೈಟ್ ಕಂಬ ಹತ್ತಿರ ಪಟಾಕಿ ಹೊಡೆಯಬಾರದು, ಪಟಾಕಿ ಹೊಡೆಯುವಾಗ ಹತ್ತಿರದಲ್ಲಿ ಗ್ಯಾಸ್ ಸಿಲಿಂಡರ್, ಸ್ಕೂಟರ್ ಇರದ ಹಾಗೆ ನೋಡಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ಪಟಾಕಿಯಿಂದ ಅನಾಹುತಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಬಗ್ಗೆ ತಿಳಿಸಬೇಕು. ಪರಿಸರ ಸ್ನೇಹಿ ಪಟಾಕಿಯನ್ನು ಮಾತ್ರ ಹೊಡೆಯಬೇಕು. ಆಂಬ್ಯುಲೆನ್ಸ್, ವೈದ್ಯರು ಮೊದಲಾದ ತುರ್ತು ಸೇವಾ ದೂರವಾಣಿ ಸಂಖ್ಯೆಗಳನ್ನು ಇಟ್ಟುಕೊಂಡಿರಬೇಕು.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ , ಮೈಸೂರು
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…