ಓದುಗರ ಪತ್ರ
ದೀಪಾವಳಿ ಹಬ್ಬವನ್ನು ಸಂತೋಷದಿಂದ ಕಳೆಯಬೇಕೆಂದರೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯಲ್ಲಿ ಪಟಾಕಿಯನ್ನು ಗಾಳಿಯಾಡುವ ಜಾಗದಲ್ಲಿ ಇಡಬೇಕು. ಪಟಾಕಿ ಹೊಡೆಯುವ ಮುನ್ನ ಹತ್ತಿ ಬಟ್ಟೆ ಧರಿಸಬೇಕು. ಬಡಾವಣೆಯ ಜನರೆಲ್ಲ ದೊಡ್ಡ ಬಯಲಿನಲ್ಲಿ ಸೇರಿ ಮುಂಜಾಗ್ರತೆಯೊಡನೆ ಪಟಾಕಿ ಹೊಡೆದರೆ ಬಡಾವಣೆಯ ಜನರ ಸಂಪರ್ಕ ಬೆಳೆದು ಸ್ನೇಹ ಪ್ರೀತಿ ವಿಶ್ವಾಸ ಬೆಳೆಯುತ್ತದೆ.
ಮಕ್ಕಳಿಗೆ ಕಡಿಮೆ ಶಬ್ದ ಸಾಮರ್ಥ್ಯವಿರುವ ಪಟಾಕಿ ಕೊಡಿಸಬೇಕು, ಅವರು ಪಟಾಕಿ, ಸುರ್ಸುರ್ ಬತ್ತಿ ಹಚ್ಚುವಾಗ ಪೋಷಕರು ಮುಂದೆ ನಿಂತು ಎಚ್ಚರ ವಹಿಸಬೇಕು. ಲೈಟ್ ಕಂಬ ಹತ್ತಿರ ಪಟಾಕಿ ಹೊಡೆಯಬಾರದು, ಪಟಾಕಿ ಹೊಡೆಯುವಾಗ ಹತ್ತಿರದಲ್ಲಿ ಗ್ಯಾಸ್ ಸಿಲಿಂಡರ್, ಸ್ಕೂಟರ್ ಇರದ ಹಾಗೆ ನೋಡಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ಪಟಾಕಿಯಿಂದ ಅನಾಹುತಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವ ಬಗ್ಗೆ ತಿಳಿಸಬೇಕು. ಪರಿಸರ ಸ್ನೇಹಿ ಪಟಾಕಿಯನ್ನು ಮಾತ್ರ ಹೊಡೆಯಬೇಕು. ಆಂಬ್ಯುಲೆನ್ಸ್, ವೈದ್ಯರು ಮೊದಲಾದ ತುರ್ತು ಸೇವಾ ದೂರವಾಣಿ ಸಂಖ್ಯೆಗಳನ್ನು ಇಟ್ಟುಕೊಂಡಿರಬೇಕು.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ , ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…