Andolana originals

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ ಮುಂದುವರಿಯುವುದು ಒಳ್ಳೆಯದು.

ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರು ಡಿನೋಟಿಫಿಕೇಷನ್ ಮಾಡಿದರು. ಮುಂದುವರಿದು ಮಾಜಿ ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಅವರು ಅದನ್ನು ಮುಂದುವರಿಸಿದರು. ನಾನು ಈಗ ಅದನ್ನು ಮುಂದುವರಿಸಿ(ಬಹುಪಾಲು ರೈತರ ವಿರೋಧವಿದ್ದರೂ)ಬಿಡದಿ ಟೌನ್ ಶಿಪ್ ಮಾಡುತ್ತೇನೆ ಎಂದು ಹೇಳಿರುವುದು ರೈತರನ್ನು ವಿಚಲಿತಗೊಳಿಸಿದೆ.

ಬಿಡದಿ ಸುತ್ತ ಮುತ್ತ ವ್ಯವಸಾಯಕ್ಕೆ ಯೋಗ್ಯವಾದ ಫಲವತ್ತಾದ ಭೂಮಿ ಇರುವುದರಿಂದ ರೈತರ ಜೀವನೋಪಾಯಕ್ಕೆ ಹೇಳಿಮಾಡಿಸಿದ ಹಾಗಿದೆ. ಸರ್ಕಾರ ಇಲ್ಲಿ ಒಂದು ಎಕರೆ ಜಮೀನಿಗೆ ೨ ಕೋಟಿ ೪೦ ಲಕ್ಷ ರೂಪಾಯಿ ಮತ್ತು ಒಂದು ಗುಂಟೆ ಜಮೀನು ಇರುವ ಮಾಲೀಕರಿಗೆ ೫ ಲಕ್ಷ ರೂಪಾಯಿ ಪರಿಹಾರ ನೀಡಿದ ನಂತರ ಬಂದ ಹಣ ರೈತರ ಬಳಿ ಎಷ್ಟು ದಿನ ಉಳಿದೀತು? ಜಮೀನು ಕಳೆದುಕೊಂಡ ರೈತರ ಪಾಡೇನು? ಅವರು ಜೀವನ ನಡೆಸಲು ಮುಂದೆ ಏನು ಮಾಡಬೇಕು ಎಂಬುದು ಪ್ರಶ್ನೆಯಾಗಿದೆ. ಇನ್ನೂ ಕಾಲ ಮಿಂಚಿಲ್ಲ ಮುಖ್ಯಮಂತ್ರಿಗಳು ಸರ್ವಪಕ್ಷಗಳ,ರೈತಪ್ರತಿನಿಧಿಗಳ, ಪರಿಸರ ತಜ್ಞರುಗಳ, ಸಭೆ ಕರೆದು ಚರ್ಚಿಸಿ ನಂತರ ಒಮ್ಮತದ ತೀರ್ಮಾನಕ್ಕೆ ಬರುವುದು ಎಲ್ಲ ದೃಷ್ಟಿಯಿಂದಲೂ ಒಳ್ಳೆಯ ಬೆಳವಣಿಗೆ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

1 hour ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

1 hour ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

1 hour ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

1 hour ago

ರೈಲು ನಿಲ್ದಾಣ ಮೇಲ್ದರ್ಜೆ ಕಾಮಗಾರಿ ಬಹುತೇಕ ಪೂರ್ಣ

ಪ್ರಸಾದ್ ಲಕ್ಕೂರು ಅಂತಿಮ ಹಂತದಲ್ಲಿ ಮೇಲ್ಸೇತುವೆ, ಲಿಫ್ಟ್, ಎಸ್ಕಲೇಟರ್ ಅಳವಡಿಕೆ; ಆಧುನೀಕರಣಗೊಂಡ ನಿಲ್ದಾಣ ೨ ತಿಂಗಳಲ್ಲಿ ಸೇವೆಗೆ  ಚಾಮರಾಜನಗರ: ಗಡಿ…

2 hours ago