ಓದುಗರ ಪತ್ರ
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ ಬೈಕ್ ಟ್ಯಾಕ್ಸಿಯನ್ನೇ ಅವಲಂಬಿಸಿದ್ದಾರೆ. ಕೆಲವೊಮ್ಮೆ ಬೈಕ್ ಟ್ಯಾಕ್ಸಿಯವರು ಬುಕ್ಕಿಂಗ್ ಆದ ೨೦ ನಿಮಿಷಗಳ ನಂತರ ಬುಕ್ಕಿಂಗ್ ಅನ್ನು ರದ್ದು ಮಾಡುವುದರಿಂದ ರೈಲು ಹಾಗೂ ಬಸ್ಸಿನ ಮೂಲಕ ಊರುಗಳಿಗೆ ತೆರಳುವವರಿಗೆ ಸಕಾಲಕ್ಕೆ ತಲುಪಲು ತೊಂದರೆಯಾಗುತ್ತಿದೆ.
ಒಬ್ಬರು ಪ್ರಯಾಣಿಕನನ್ನು ಕರೆದುಕೊಂಡು ಹೋಗುವಾಗಲೇ ಮತ್ತೊಂದು ಬುಕ್ಕಿಂಗ್ ಮಾಡಿಕೊಂಡು ನಿಗದಿತ ಸಮಯಕ್ಕೆ ತಲುಪುವ ಧಾವಂತದಲ್ಲಿ ಮಿತಿ ಮೀರಿದ ವೇಗದಲ್ಲಿ ಹೋಗುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿರುತ್ತದೆ. ಸಂಬಂಧಪಟ್ಟವರು ಕೂಡಲೇ ನಿಯಮವನ್ನು ಪಾಲಿಸಲು ಬೈಕ್ ಟ್ಯಾಕ್ಸಿ ಚಾಲಕರಿಗೆ ಸೂಚಿಸುವುದರ ಮೂಲಕ ಪ್ರಯಾಣಿಕರ ಹಿತ ಕಾಪಾಡಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…
ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…
ಮಹಾದೇಶ್ ಎಂ ಗೌಡ ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…
ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…
ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…
ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…