Andolana originals

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಚಾಲಕರು ನಿಯಮ ಪಾಲಿಸಲಿ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ ಬೈಕ್ ಟ್ಯಾಕ್ಸಿಯನ್ನೇ ಅವಲಂಬಿಸಿದ್ದಾರೆ. ಕೆಲವೊಮ್ಮೆ ಬೈಕ್‌ ಟ್ಯಾಕ್ಸಿಯವರು ಬುಕ್ಕಿಂಗ್ ಆದ ೨೦ ನಿಮಿಷಗಳ ನಂತರ ಬುಕ್ಕಿಂಗ್ ಅನ್ನು ರದ್ದು ಮಾಡುವುದರಿಂದ ರೈಲು ಹಾಗೂ ಬಸ್ಸಿನ ಮೂಲಕ ಊರುಗಳಿಗೆ ತೆರಳುವವರಿಗೆ ಸಕಾಲಕ್ಕೆ ತಲುಪಲು ತೊಂದರೆಯಾಗುತ್ತಿದೆ.

ಒಬ್ಬರು ಪ್ರಯಾಣಿಕನನ್ನು ಕರೆದುಕೊಂಡು ಹೋಗುವಾಗಲೇ ಮತ್ತೊಂದು ಬುಕ್ಕಿಂಗ್ ಮಾಡಿಕೊಂಡು ನಿಗದಿತ ಸಮಯಕ್ಕೆ ತಲುಪುವ ಧಾವಂತದಲ್ಲಿ ಮಿತಿ ಮೀರಿದ ವೇಗದಲ್ಲಿ ಹೋಗುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿರುತ್ತದೆ. ಸಂಬಂಧಪಟ್ಟವರು ಕೂಡಲೇ ನಿಯಮವನ್ನು ಪಾಲಿಸಲು ಬೈಕ್ ಟ್ಯಾಕ್ಸಿ ಚಾಲಕರಿಗೆ ಸೂಚಿಸುವುದರ ಮೂಲಕ ಪ್ರಯಾಣಿಕರ ಹಿತ ಕಾಪಾಡಬೇಕಾಗಿದೆ.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

2 mins ago

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…

4 mins ago

ಓದುಗರ ಪತ್ರ: ‘ಉದಯರವಿ’ಯನ್ನು ಸ್ಮಾರಕವನ್ನಾಗಿ ರೂಪಿಸಿ

ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…

8 mins ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಸಮರ್ಥ ಕಾಯ್ದೆ ಪಾಲನಾ ವ್ಯವಸ್ಥೆ ಮುಖ್ಯ

ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…

10 mins ago

ಕಾಫಿ ಬೆಳೆಗಾರರ ನಿದ್ದೆಗೆಡಿಸಿದ ದರ ಕುಸಿತ

ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…

17 mins ago

ಗಾಣಿಗ ಮಂಗಲ ಆಶ್ರಮ ಶಾಲೆ ಕಟ್ಟಡ ಕಾಮಗಾರಿ ಪೂರ್ಣ

ಮಹಾದೇಶ್ ಎಂ.ಗೌಡ ಜ.೧೭ರಂದು ಶಾಸಕ ಮಂಜುನಾಥ್ ಅವರಿಂದ ಉದ್ಘಾಟನೆ; ಪೋಷಕರು, ವಿದ್ಯಾರ್ಥಿಗಳಲ್ಲಿ ಮನೆ ಮಾಡಿದ ಸಂತ ಹನೂರು: ತಾಲ್ಲೂಕಿನ ಕಾವೇರಿ…

23 mins ago