Andolana originals

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಚಾಲಕರು ನಿಯಮ ಪಾಲಿಸಲಿ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ ಬೈಕ್ ಟ್ಯಾಕ್ಸಿಯನ್ನೇ ಅವಲಂಬಿಸಿದ್ದಾರೆ. ಕೆಲವೊಮ್ಮೆ ಬೈಕ್‌ ಟ್ಯಾಕ್ಸಿಯವರು ಬುಕ್ಕಿಂಗ್ ಆದ ೨೦ ನಿಮಿಷಗಳ ನಂತರ ಬುಕ್ಕಿಂಗ್ ಅನ್ನು ರದ್ದು ಮಾಡುವುದರಿಂದ ರೈಲು ಹಾಗೂ ಬಸ್ಸಿನ ಮೂಲಕ ಊರುಗಳಿಗೆ ತೆರಳುವವರಿಗೆ ಸಕಾಲಕ್ಕೆ ತಲುಪಲು ತೊಂದರೆಯಾಗುತ್ತಿದೆ.

ಒಬ್ಬರು ಪ್ರಯಾಣಿಕನನ್ನು ಕರೆದುಕೊಂಡು ಹೋಗುವಾಗಲೇ ಮತ್ತೊಂದು ಬುಕ್ಕಿಂಗ್ ಮಾಡಿಕೊಂಡು ನಿಗದಿತ ಸಮಯಕ್ಕೆ ತಲುಪುವ ಧಾವಂತದಲ್ಲಿ ಮಿತಿ ಮೀರಿದ ವೇಗದಲ್ಲಿ ಹೋಗುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿರುತ್ತದೆ. ಸಂಬಂಧಪಟ್ಟವರು ಕೂಡಲೇ ನಿಯಮವನ್ನು ಪಾಲಿಸಲು ಬೈಕ್ ಟ್ಯಾಕ್ಸಿ ಚಾಲಕರಿಗೆ ಸೂಚಿಸುವುದರ ಮೂಲಕ ಪ್ರಯಾಣಿಕರ ಹಿತ ಕಾಪಾಡಬೇಕಾಗಿದೆ.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

5 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

5 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

6 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

6 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

7 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

8 hours ago