ಓದುಗರ ಪತ್ರ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ ಜಾಹೀರಾತುಗಳಲ್ಲಿ ಪಾನ್ ಮಸಾಲ ಹಾಗೂತಂಬಾಕು ಉತ್ಪನ್ನಗಳನ್ನು ಪ್ರಚೋದಿಸುವ ಜಾಹೀರಾತುಗಳನ್ನು ಅಳವಡಿಸುವುದು ಎಷ್ಟು ಸರಿ ? ಎಂಬ ಪ್ರಶ್ನೆ ಕಾಡುತ್ತದೆ. ಬಿಎಂಟಿಸಿ ಬಸ್ಗಳು ಪ್ರತಿದಿನ ಲಕ್ಷಾಂತರ ಜನರಿಗೆ, ಅದರಲ್ಲೂ ವಿದ್ಯಾರ್ಥಿಗಳು, ಯುವಕರು ಹಾಗೂ ಸಾಮಾನ್ಯ ನಾಗರಿಕರಿಗೆ ನೇರವಾಗಿ ಕಾಣುವ ಸಾರ್ವಜನಿಕ ಮಾಧ್ಯಮ. ಪಾನ್ ಮಸಾಲ ಮತ್ತು ತಂಬಾಕು ಆರೋಗ್ಯಕ್ಕೆ ಹಾನಿಕಾರಕ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಇಂತಹ ಜಾಹೀರಾತುಗಳು ಯುವ ಮನಸ್ಸುಗಳ ಮೇಲೆ ಕೆಟ್ಟ ಪ್ರಭಾವ ಬೀರುವ ಸಾಧ್ಯತೆ ಇದೆ. ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಉತ್ಪನ್ನಗಳಿಂದ ಆದಾಯ ಗಳಿಸುವುದು ನೈತಿಕವಾಗಿಯೂ ಸರಿಯಲ್ಲ.
ಸರ್ಕಾರದ ಜಾಹೀರಾತು ನೀತಿ ಹಾಗೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ, ಸಮಾಜದ ಹಿತವನ್ನು ಕಾಪಾಡುವುದು ಅಗತ್ಯ. ಮದ್ಯ, ತಂಬಾಕು, ಪಾನ್ ಮಸಾಲದಂತಹ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ನಿಷೇಽಸಿ, ಶಿಕ್ಷಣ, ಆರೋಗ್ಯ, ಪರಿಸರ ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವ ಜಾಹೀರಾತುಗಳಿಗೆ ಆದ್ಯತೆ ನೀಡಬೇಕು. ಆದಾಯಕ್ಕಿಂತಲೂ ಜನರ ಆರೋಗ್ಯ ಮತ್ತು ಭವಿಷ್ಯ ಮುಖ್ಯ ಎಂಬುದನ್ನು ಬಿಎಂಟಿಸಿ ಮತ್ತು ಸರ್ಕಾರ ಮನಗಾಣಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…