Andolana originals

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ ಜಾಹೀರಾತುಗಳಲ್ಲಿ ಪಾನ್ ಮಸಾಲ ಹಾಗೂತಂಬಾಕು ಉತ್ಪನ್ನಗಳನ್ನು ಪ್ರಚೋದಿಸುವ ಜಾಹೀರಾತುಗಳನ್ನು ಅಳವಡಿಸುವುದು ಎಷ್ಟು ಸರಿ ? ಎಂಬ ಪ್ರಶ್ನೆ ಕಾಡುತ್ತದೆ. ಬಿಎಂಟಿಸಿ ಬಸ್‌ಗಳು ಪ್ರತಿದಿನ ಲಕ್ಷಾಂತರ ಜನರಿಗೆ, ಅದರಲ್ಲೂ ವಿದ್ಯಾರ್ಥಿಗಳು, ಯುವಕರು ಹಾಗೂ ಸಾಮಾನ್ಯ ನಾಗರಿಕರಿಗೆ ನೇರವಾಗಿ ಕಾಣುವ ಸಾರ್ವಜನಿಕ ಮಾಧ್ಯಮ. ಪಾನ್ ಮಸಾಲ ಮತ್ತು ತಂಬಾಕು ಆರೋಗ್ಯಕ್ಕೆ ಹಾನಿಕಾರಕ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಇಂತಹ ಜಾಹೀರಾತುಗಳು ಯುವ ಮನಸ್ಸುಗಳ ಮೇಲೆ ಕೆಟ್ಟ ಪ್ರಭಾವ ಬೀರುವ ಸಾಧ್ಯತೆ ಇದೆ. ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಉತ್ಪನ್ನಗಳಿಂದ ಆದಾಯ ಗಳಿಸುವುದು ನೈತಿಕವಾಗಿಯೂ ಸರಿಯಲ್ಲ.

ಸರ್ಕಾರದ ಜಾಹೀರಾತು ನೀತಿ ಹಾಗೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ, ಸಮಾಜದ ಹಿತವನ್ನು ಕಾಪಾಡುವುದು ಅಗತ್ಯ. ಮದ್ಯ, ತಂಬಾಕು, ಪಾನ್ ಮಸಾಲದಂತಹ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ನಿಷೇಽಸಿ, ಶಿಕ್ಷಣ, ಆರೋಗ್ಯ, ಪರಿಸರ ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವ ಜಾಹೀರಾತುಗಳಿಗೆ ಆದ್ಯತೆ ನೀಡಬೇಕು. ಆದಾಯಕ್ಕಿಂತಲೂ ಜನರ ಆರೋಗ್ಯ ಮತ್ತು ಭವಿಷ್ಯ ಮುಖ್ಯ ಎಂಬುದನ್ನು ಬಿಎಂಟಿಸಿ ಮತ್ತು ಸರ್ಕಾರ ಮನಗಾಣಬೇಕು.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

8 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

8 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago