ಓದುಗರ ಪತ್ರ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ ಜಾಹೀರಾತುಗಳಲ್ಲಿ ಪಾನ್ ಮಸಾಲ ಹಾಗೂತಂಬಾಕು ಉತ್ಪನ್ನಗಳನ್ನು ಪ್ರಚೋದಿಸುವ ಜಾಹೀರಾತುಗಳನ್ನು ಅಳವಡಿಸುವುದು ಎಷ್ಟು ಸರಿ ? ಎಂಬ ಪ್ರಶ್ನೆ ಕಾಡುತ್ತದೆ. ಬಿಎಂಟಿಸಿ ಬಸ್ಗಳು ಪ್ರತಿದಿನ ಲಕ್ಷಾಂತರ ಜನರಿಗೆ, ಅದರಲ್ಲೂ ವಿದ್ಯಾರ್ಥಿಗಳು, ಯುವಕರು ಹಾಗೂ ಸಾಮಾನ್ಯ ನಾಗರಿಕರಿಗೆ ನೇರವಾಗಿ ಕಾಣುವ ಸಾರ್ವಜನಿಕ ಮಾಧ್ಯಮ. ಪಾನ್ ಮಸಾಲ ಮತ್ತು ತಂಬಾಕು ಆರೋಗ್ಯಕ್ಕೆ ಹಾನಿಕಾರಕ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಇಂತಹ ಜಾಹೀರಾತುಗಳು ಯುವ ಮನಸ್ಸುಗಳ ಮೇಲೆ ಕೆಟ್ಟ ಪ್ರಭಾವ ಬೀರುವ ಸಾಧ್ಯತೆ ಇದೆ. ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಉತ್ಪನ್ನಗಳಿಂದ ಆದಾಯ ಗಳಿಸುವುದು ನೈತಿಕವಾಗಿಯೂ ಸರಿಯಲ್ಲ.
ಸರ್ಕಾರದ ಜಾಹೀರಾತು ನೀತಿ ಹಾಗೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ, ಸಮಾಜದ ಹಿತವನ್ನು ಕಾಪಾಡುವುದು ಅಗತ್ಯ. ಮದ್ಯ, ತಂಬಾಕು, ಪಾನ್ ಮಸಾಲದಂತಹ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ನಿಷೇಽಸಿ, ಶಿಕ್ಷಣ, ಆರೋಗ್ಯ, ಪರಿಸರ ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವ ಜಾಹೀರಾತುಗಳಿಗೆ ಆದ್ಯತೆ ನೀಡಬೇಕು. ಆದಾಯಕ್ಕಿಂತಲೂ ಜನರ ಆರೋಗ್ಯ ಮತ್ತು ಭವಿಷ್ಯ ಮುಖ್ಯ ಎಂಬುದನ್ನು ಬಿಎಂಟಿಸಿ ಮತ್ತು ಸರ್ಕಾರ ಮನಗಾಣಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…
ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…