ಹರಿಯಾಣ ವಿಧಾನಸಭಾ ಚುನಾವಣೆಯ ಸಲುವಾಗಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳಂತೆಯೇ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ರೂ. , ಗ್ಯಾಸ್ ಸಿಲಿಂಡರ್ಗಳ ದರ ೫೦೦ ರೂ. ಗಳಿಗೆ ಇಳಿಕೆ, ವೃದ್ಧರಿಗೆ ಮಾಸಿಕ ೬,೦೦೦ ರೂ. ಪಿಂಚಣಿ ನೀಡುವುದಾಗಿ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಬಿಜೆಪಿಯೂ ಮಹಿಳೆಯರಿಗೆ ಮಾಸಿಕ ೨,೧೦೦ ರೂ. ಹಾಗೂ ಗ್ಯಾಸ್ ಸಿಲಿಂಡರ್ ದರವನ್ನು ೫೦೦ ರೂ. ಗಳಿಗೆ ಇಳಿಸುವುದಾಗಿ ಭರವಸೆ ನೀಡಿದೆ.
ಕರ್ನಾಟಕದ ವಿಧಾನಸಭಾ ಚುನಾವಣೆ ವೇಳೆ ಪ್ರಚಾರಕ್ಕೆಂದು ಬಂದಿದ್ದ ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದರು. ಆದರೆ ಈಗ ಕಾಂಗ್ರೆಸ್ ಮಾದರಿಯಲ್ಲಿಯೇ ಬಿಜೆಪಿಯೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದ್ದು, ಈ ಯೋಜನೆಗಳನ್ನು ಮೋದಿ ಹೊಗಳಿಕೊಂಡಿದ್ದಾರೆ. ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದ ಬಿಜೆಪಿ ಈಗ ಚುನಾವಣೆಯನ್ನು ಗೆಲ್ಲಲು ಅನಿವಾರ್ಯವಾಗಿ ತಾನೂ ಗ್ಯಾರಂಟಿ ಯೋಜನೆಗಳ ಮೊರೆ ಹೋಗಿದೆ. ಯಾವುದೇ ರಾಜಕೀಯ ಪಕ್ಷವಾದರೂ ತಾನು ಅಽಕಾರಕ್ಕೆ ಬರುವ ಉದ್ದೇಶ ಹೊಂದಿರುತ್ತದೆಯೇ ವಿನಾ ಸೇವೆಯನ್ನಲ್ಲ ಎಂಬುದು ರಾಜಕೀಯ ಪಕ್ಷಗಳು ಪೈಪೋಟಿಗೆ ಬಿದ್ದಂತೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿರುವುದನ್ನು ನೋಡಿದರೆ ತಿಳಿಯುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವ ಸಲುವಾಗಿ ಸರ್ಕಾರಗಳು ಆಸ್ತಿ ತೆರಿಗೆ, ನೋಂದಣಿ ಶುಲ್ಕ, ಅಬಕಾರಿ ತೆರಿಗೆ, ವಾಣಿಜ್ಯ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ತಮ್ಮ ಮೇಲಿನ ಹೊರೆಯನ್ನು ಜನರ ಮೇಲೆ ಹೊರಿಸುತ್ತವೆ. ರಾಜಕೀಯ ಪಕ್ಷಗಳ ಈ ನಡವಳಿಕೆಯನ್ನು ನೋಡಿದಾಗ ‘ಉಪದೇಶ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬ ನಾಣ್ಣುಡಿ ನೆನಪಾಗುತ್ತದೆ.
-ಮುಳ್ಳೂರು ಪ್ರಕಾಶ್, ದಟ್ಟಗಳ್ಳಿ, ಮೈಸೂರು
ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…
ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…
ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…