Andolana originals

ಓದುಗರ ಪತ್ರ: ಪೈಪೋಟಿಯ ಮೇಲೆ ಗ್ಯಾರಂಟಿ ಯೋಜನೆಗಳ ಘೋಷಣೆ!

ಹರಿಯಾಣ ವಿಧಾನಸಭಾ ಚುನಾವಣೆಯ ಸಲುವಾಗಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳಂತೆಯೇ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ರೂ. , ಗ್ಯಾಸ್ ಸಿಲಿಂಡರ್‌ಗಳ ದರ ೫೦೦ ರೂ. ಗಳಿಗೆ ಇಳಿಕೆ, ವೃದ್ಧರಿಗೆ ಮಾಸಿಕ ೬,೦೦೦ ರೂ. ಪಿಂಚಣಿ ನೀಡುವುದಾಗಿ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಬಿಜೆಪಿಯೂ ಮಹಿಳೆಯರಿಗೆ ಮಾಸಿಕ ೨,೧೦೦ ರೂ. ಹಾಗೂ ಗ್ಯಾಸ್ ಸಿಲಿಂಡರ್ ದರವನ್ನು ೫೦೦ ರೂ. ಗಳಿಗೆ ಇಳಿಸುವುದಾಗಿ ಭರವಸೆ ನೀಡಿದೆ.

ಕರ್ನಾಟಕದ ವಿಧಾನಸಭಾ ಚುನಾವಣೆ ವೇಳೆ ಪ್ರಚಾರಕ್ಕೆಂದು ಬಂದಿದ್ದ ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದರು. ಆದರೆ ಈಗ ಕಾಂಗ್ರೆಸ್ ಮಾದರಿಯಲ್ಲಿಯೇ ಬಿಜೆಪಿಯೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದ್ದು, ಈ ಯೋಜನೆಗಳನ್ನು ಮೋದಿ ಹೊಗಳಿಕೊಂಡಿದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದ ಬಿಜೆಪಿ ಈಗ ಚುನಾವಣೆಯನ್ನು ಗೆಲ್ಲಲು ಅನಿವಾರ್ಯವಾಗಿ ತಾನೂ ಗ್ಯಾರಂಟಿ ಯೋಜನೆಗಳ ಮೊರೆ ಹೋಗಿದೆ. ಯಾವುದೇ ರಾಜಕೀಯ ಪಕ್ಷವಾದರೂ ತಾನು ಅಽಕಾರಕ್ಕೆ ಬರುವ ಉದ್ದೇಶ ಹೊಂದಿರುತ್ತದೆಯೇ ವಿನಾ ಸೇವೆಯನ್ನಲ್ಲ ಎಂಬುದು ರಾಜಕೀಯ ಪಕ್ಷಗಳು ಪೈಪೋಟಿಗೆ ಬಿದ್ದಂತೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿರುವುದನ್ನು ನೋಡಿದರೆ ತಿಳಿಯುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವ ಸಲುವಾಗಿ ಸರ್ಕಾರಗಳು ಆಸ್ತಿ ತೆರಿಗೆ, ನೋಂದಣಿ ಶುಲ್ಕ, ಅಬಕಾರಿ ತೆರಿಗೆ, ವಾಣಿಜ್ಯ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ತಮ್ಮ ಮೇಲಿನ ಹೊರೆಯನ್ನು ಜನರ ಮೇಲೆ ಹೊರಿಸುತ್ತವೆ. ರಾಜಕೀಯ ಪಕ್ಷಗಳ ಈ ನಡವಳಿಕೆಯನ್ನು ನೋಡಿದಾಗ ‘ಉಪದೇಶ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬ ನಾಣ್ಣುಡಿ ನೆನಪಾಗುತ್ತದೆ.

-ಮುಳ್ಳೂರು ಪ್ರಕಾಶ್, ದಟ್ಟಗಳ್ಳಿ, ಮೈಸೂರು

 

andolana

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

2 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago