Andolana originals

ಓದುಗರ ಪತ್ರ: ಪೈಪೋಟಿಯ ಮೇಲೆ ಗ್ಯಾರಂಟಿ ಯೋಜನೆಗಳ ಘೋಷಣೆ!

ಹರಿಯಾಣ ವಿಧಾನಸಭಾ ಚುನಾವಣೆಯ ಸಲುವಾಗಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳಂತೆಯೇ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ರೂ. , ಗ್ಯಾಸ್ ಸಿಲಿಂಡರ್‌ಗಳ ದರ ೫೦೦ ರೂ. ಗಳಿಗೆ ಇಳಿಕೆ, ವೃದ್ಧರಿಗೆ ಮಾಸಿಕ ೬,೦೦೦ ರೂ. ಪಿಂಚಣಿ ನೀಡುವುದಾಗಿ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಬಿಜೆಪಿಯೂ ಮಹಿಳೆಯರಿಗೆ ಮಾಸಿಕ ೨,೧೦೦ ರೂ. ಹಾಗೂ ಗ್ಯಾಸ್ ಸಿಲಿಂಡರ್ ದರವನ್ನು ೫೦೦ ರೂ. ಗಳಿಗೆ ಇಳಿಸುವುದಾಗಿ ಭರವಸೆ ನೀಡಿದೆ.

ಕರ್ನಾಟಕದ ವಿಧಾನಸಭಾ ಚುನಾವಣೆ ವೇಳೆ ಪ್ರಚಾರಕ್ಕೆಂದು ಬಂದಿದ್ದ ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದರು. ಆದರೆ ಈಗ ಕಾಂಗ್ರೆಸ್ ಮಾದರಿಯಲ್ಲಿಯೇ ಬಿಜೆಪಿಯೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದ್ದು, ಈ ಯೋಜನೆಗಳನ್ನು ಮೋದಿ ಹೊಗಳಿಕೊಂಡಿದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದ ಬಿಜೆಪಿ ಈಗ ಚುನಾವಣೆಯನ್ನು ಗೆಲ್ಲಲು ಅನಿವಾರ್ಯವಾಗಿ ತಾನೂ ಗ್ಯಾರಂಟಿ ಯೋಜನೆಗಳ ಮೊರೆ ಹೋಗಿದೆ. ಯಾವುದೇ ರಾಜಕೀಯ ಪಕ್ಷವಾದರೂ ತಾನು ಅಽಕಾರಕ್ಕೆ ಬರುವ ಉದ್ದೇಶ ಹೊಂದಿರುತ್ತದೆಯೇ ವಿನಾ ಸೇವೆಯನ್ನಲ್ಲ ಎಂಬುದು ರಾಜಕೀಯ ಪಕ್ಷಗಳು ಪೈಪೋಟಿಗೆ ಬಿದ್ದಂತೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿರುವುದನ್ನು ನೋಡಿದರೆ ತಿಳಿಯುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವ ಸಲುವಾಗಿ ಸರ್ಕಾರಗಳು ಆಸ್ತಿ ತೆರಿಗೆ, ನೋಂದಣಿ ಶುಲ್ಕ, ಅಬಕಾರಿ ತೆರಿಗೆ, ವಾಣಿಜ್ಯ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ತಮ್ಮ ಮೇಲಿನ ಹೊರೆಯನ್ನು ಜನರ ಮೇಲೆ ಹೊರಿಸುತ್ತವೆ. ರಾಜಕೀಯ ಪಕ್ಷಗಳ ಈ ನಡವಳಿಕೆಯನ್ನು ನೋಡಿದಾಗ ‘ಉಪದೇಶ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬ ನಾಣ್ಣುಡಿ ನೆನಪಾಗುತ್ತದೆ.

-ಮುಳ್ಳೂರು ಪ್ರಕಾಶ್, ದಟ್ಟಗಳ್ಳಿ, ಮೈಸೂರು

 

andolana

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 hour ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

6 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

6 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

6 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

11 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

11 hours ago