ಓದುಗರ ಪತ್ರ
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ ಸೇತುವೆಯ ಇಕ್ಕೆಲದಲ್ಲಿ ನಿರ್ಮಿಸಿರುವ ತಡೆಗೋಡೆಗಳು ಬಹುತೇಕ ಮುರಿದುಬಿದ್ದಿವೆ. ಹಾಗಾಗಿ ಸೇತುವೆ ಅಪಾಯಕಾರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ರಸ್ತೆಯು ದಡದಹಳ್ಳಿ ದಾಟಿ ಮೈಸೂರಿಗೂ ಸಂಪರ್ಕಗೊಂಡಿದೆ. ಇಲ್ಲಿ ದ್ವಿಚಕ್ರ ವಾಹನಗಳು, ನಾಲ್ಕುಚಕ್ರ ವಾಹನಗಳು ಹೆಚ್ಚಾಗಿ ಸಂಚರಿಸುತ್ತವೆ. ಸೇತುವೆಯ ಬಳಿಯಲ್ಲಿ ರಸ್ತೆಯ ಡಾಂಬರು ಕಿತ್ತುಹೋಗಿ ಹಳ್ಳ-ಕೊಳ್ಳಗಳು ತಲೆಯೆತ್ತಿವೆ. ತಡೆಗೋಡೆಗಳೂ ಮುರಿದುಬಿದ್ದಿರುವ ಕಾರಣ ಅಪಘಾತ ಸಂಭವಿಸಬಹುದು. ಸ್ವಲ್ಪ ಹೆಚ್ಚುಕಡಿಮೆಯಾದರೂ ವಾಹನಗಳು ಎಣ್ಣೆಹೊಳೆಗೆ ಬೀಳುವಂತಹ ಸನ್ನಿವೇಶ ಇದೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಽಗಳು ಅಪಘಾತ ಸಂಭವಿಸುವ ಮೊದಲೇ ಎಚ್ಚೆತುಕೊಂಡು, ಈ ಸೇತುವೆಯ ದುರಸ್ತಿಗೆ ಕ್ರಮವಹಿಸಬೇಕು.
-ಮಂಜುನಾಥ್, ಕಡಕೊಳ, ಮೈಸೂರು ತಾ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…