Mysore
22
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಓದುಗರ ಪತ್ರ: ಅಲೆಮಾರಿ ಸಮುದಾಯವನ್ನು ಮುಖ್ಯ ವಾಹಿನಿಗೆ ತನ್ನಿ

ಓದುಗರ ಪತ್ರ

ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕಾಗಿ ದೂರದ ಕಲಬುರಗಿಯಿಂದ ಪೋಷಕರೊಡನೆ ನಗರಕ್ಕೆ ಆಗಮಿಸಿದ್ದ ಅಲೆಮಾರಿ ಸಮುದಾಯದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ.

ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಲಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.  ರಾಜ್ಯ ಸರ್ಕಾರ ಕೂಡಲೇ ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆ ನೀಡುವ ಮೂಲಕ ಹತ್ಯೆಗೀಡಾದ ಬಾಲಕಿಯ ಕುಟುಂಬಕ್ಕೆ ನ್ಯಾಯ ಕಲ್ಪಿಸಬೇಕು ಹಾಗೂ ಅಲೆಮಾರಿ ಸಮುದಾಯದವರಿಗೆ ಶಿಕ್ಷಣ, ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

Tags:
error: Content is protected !!