Andolana originals

ಓದುಗರ ಪತ್ರ: ರೈಲ್ವೆ ತಂತ್ರಾಂಶದಲ್ಲಿ ದೋಷ

ರೈಲ್ವೆ ಪ್ರಯಾಣ ದರ ಕಡಿಮೆ ಇರುವುದರಿಂದ ಹಾಗೂ ಒಂದೇ ಬಾರಿಗೆ ಅಧಿಕ ಜನರು ಪ್ರಯಾಣಿಸಲು ಅವಕಾಶವಿರುವುದರಿಂದ ಹೆಚ್ಚಿನ ಜನರು ರೈಲ್ವೆ ಸಾರಿಗೆಯನ್ನು ಬಳಸುತ್ತಾರೆ. ರೈಲ್ವೆ ಇಲಾಖೆಯೂ ಸಾಕಷ್ಟು ತಂತ್ರಾಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ. ಇಂತಹ ತಂತ್ರಾಂಶಗಳಲ್ಲಿ “ವೇರ್ ಇಸ್ ಮೈ ಟೈನ್’ (Where is My Train) ಆ್ಯಪ್ ಕೂಡ ಒಂದು. ಅನೇಕ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುವಾಗ ತಾವು ಪ್ರಯಾಣಿಸುವ ರೈಲು ಎಲ್ಲಿ ಹೋಗುತ್ತಿದೆ? ಮುಂದಿನ ನಿಲ್ದಾಣ ಯಾವುದು? ಎಂದು ತಿಳಿಯಲು ಈ ಆ್ಯಪ್ ಬಳಸುತ್ತಾರೆ. ಆದರೆ ಇತ್ತೀಚೆಗೆ ಈ ಆ್ಯಪ್‌ನಲ್ಲಿ ಸಮಸ್ಯೆಗಳು ಸೃಷ್ಟಿಯಾಗಿದ್ದು, ಕೆಲ ಬಾರಿ ರೈಲಿನ ಲೊಕೇಷನ್‌ ಅನ್ನು ಸರಿಯಾಗಿ ತೋರಿಸುತ್ತಿಲ್ಲ. 12ರಂದು ಇದೇ ಸಮಸ್ಯೆಯಾಗಿತ್ತು. ಸಂಜೆ 7.50ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮೂರನೇ ಪ್ಲಾಟ್ ಫಾರಂನಿಂದ ಹೊರಟಿತ್ತು. ಆದರೆ ವೇರ್ ಈಸ್ ಮೈ ಟೈನ್‌’ ಆ್ಯಪ್‌ನಲ್ಲಿ ರೈಲು ನಾಲ್ಕನೇ ಪ್ಲಾಟ್ ಫಾರಂನಲ್ಲಿ ಇರುವುದಾಗಿ ತೋರಿಸುತ್ತಿತ್ತು. ಇದರಿಂದಾಗಿ ಪ್ರಯಾಣಿಕರು ಗೊಂದಲಕ್ಕೀಡಾದರು. ಆದ್ದರಿಂದ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

ಆಂದೋಲನ ಡೆಸ್ಕ್

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

14 mins ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

2 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

2 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

3 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

5 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

5 hours ago