Andolana originals

ಓದುಗರ ಪತ್ರ: ರೈಲ್ವೆ ತಂತ್ರಾಂಶದಲ್ಲಿ ದೋಷ

ರೈಲ್ವೆ ಪ್ರಯಾಣ ದರ ಕಡಿಮೆ ಇರುವುದರಿಂದ ಹಾಗೂ ಒಂದೇ ಬಾರಿಗೆ ಅಧಿಕ ಜನರು ಪ್ರಯಾಣಿಸಲು ಅವಕಾಶವಿರುವುದರಿಂದ ಹೆಚ್ಚಿನ ಜನರು ರೈಲ್ವೆ ಸಾರಿಗೆಯನ್ನು ಬಳಸುತ್ತಾರೆ. ರೈಲ್ವೆ ಇಲಾಖೆಯೂ ಸಾಕಷ್ಟು ತಂತ್ರಾಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ. ಇಂತಹ ತಂತ್ರಾಂಶಗಳಲ್ಲಿ “ವೇರ್ ಇಸ್ ಮೈ ಟೈನ್’ (Where is My Train) ಆ್ಯಪ್ ಕೂಡ ಒಂದು. ಅನೇಕ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುವಾಗ ತಾವು ಪ್ರಯಾಣಿಸುವ ರೈಲು ಎಲ್ಲಿ ಹೋಗುತ್ತಿದೆ? ಮುಂದಿನ ನಿಲ್ದಾಣ ಯಾವುದು? ಎಂದು ತಿಳಿಯಲು ಈ ಆ್ಯಪ್ ಬಳಸುತ್ತಾರೆ. ಆದರೆ ಇತ್ತೀಚೆಗೆ ಈ ಆ್ಯಪ್‌ನಲ್ಲಿ ಸಮಸ್ಯೆಗಳು ಸೃಷ್ಟಿಯಾಗಿದ್ದು, ಕೆಲ ಬಾರಿ ರೈಲಿನ ಲೊಕೇಷನ್‌ ಅನ್ನು ಸರಿಯಾಗಿ ತೋರಿಸುತ್ತಿಲ್ಲ. 12ರಂದು ಇದೇ ಸಮಸ್ಯೆಯಾಗಿತ್ತು. ಸಂಜೆ 7.50ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮೂರನೇ ಪ್ಲಾಟ್ ಫಾರಂನಿಂದ ಹೊರಟಿತ್ತು. ಆದರೆ ವೇರ್ ಈಸ್ ಮೈ ಟೈನ್‌’ ಆ್ಯಪ್‌ನಲ್ಲಿ ರೈಲು ನಾಲ್ಕನೇ ಪ್ಲಾಟ್ ಫಾರಂನಲ್ಲಿ ಇರುವುದಾಗಿ ತೋರಿಸುತ್ತಿತ್ತು. ಇದರಿಂದಾಗಿ ಪ್ರಯಾಣಿಕರು ಗೊಂದಲಕ್ಕೀಡಾದರು. ಆದ್ದರಿಂದ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

8 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

8 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

9 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

9 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

9 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

11 hours ago