Andolana originals

ಓದುಗರ ಪತ್ರ: ರೈಲ್ವೆ ತಂತ್ರಾಂಶದಲ್ಲಿ ದೋಷ

ರೈಲ್ವೆ ಪ್ರಯಾಣ ದರ ಕಡಿಮೆ ಇರುವುದರಿಂದ ಹಾಗೂ ಒಂದೇ ಬಾರಿಗೆ ಅಧಿಕ ಜನರು ಪ್ರಯಾಣಿಸಲು ಅವಕಾಶವಿರುವುದರಿಂದ ಹೆಚ್ಚಿನ ಜನರು ರೈಲ್ವೆ ಸಾರಿಗೆಯನ್ನು ಬಳಸುತ್ತಾರೆ. ರೈಲ್ವೆ ಇಲಾಖೆಯೂ ಸಾಕಷ್ಟು ತಂತ್ರಾಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ. ಇಂತಹ ತಂತ್ರಾಂಶಗಳಲ್ಲಿ “ವೇರ್ ಇಸ್ ಮೈ ಟೈನ್’ (Where is My Train) ಆ್ಯಪ್ ಕೂಡ ಒಂದು. ಅನೇಕ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುವಾಗ ತಾವು ಪ್ರಯಾಣಿಸುವ ರೈಲು ಎಲ್ಲಿ ಹೋಗುತ್ತಿದೆ? ಮುಂದಿನ ನಿಲ್ದಾಣ ಯಾವುದು? ಎಂದು ತಿಳಿಯಲು ಈ ಆ್ಯಪ್ ಬಳಸುತ್ತಾರೆ. ಆದರೆ ಇತ್ತೀಚೆಗೆ ಈ ಆ್ಯಪ್‌ನಲ್ಲಿ ಸಮಸ್ಯೆಗಳು ಸೃಷ್ಟಿಯಾಗಿದ್ದು, ಕೆಲ ಬಾರಿ ರೈಲಿನ ಲೊಕೇಷನ್‌ ಅನ್ನು ಸರಿಯಾಗಿ ತೋರಿಸುತ್ತಿಲ್ಲ. 12ರಂದು ಇದೇ ಸಮಸ್ಯೆಯಾಗಿತ್ತು. ಸಂಜೆ 7.50ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮೂರನೇ ಪ್ಲಾಟ್ ಫಾರಂನಿಂದ ಹೊರಟಿತ್ತು. ಆದರೆ ವೇರ್ ಈಸ್ ಮೈ ಟೈನ್‌’ ಆ್ಯಪ್‌ನಲ್ಲಿ ರೈಲು ನಾಲ್ಕನೇ ಪ್ಲಾಟ್ ಫಾರಂನಲ್ಲಿ ಇರುವುದಾಗಿ ತೋರಿಸುತ್ತಿತ್ತು. ಇದರಿಂದಾಗಿ ಪ್ರಯಾಣಿಕರು ಗೊಂದಲಕ್ಕೀಡಾದರು. ಆದ್ದರಿಂದ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

ಆಂದೋಲನ ಡೆಸ್ಕ್

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

2 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

2 hours ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

2 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

2 hours ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

2 hours ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

11 hours ago