ಓದುಗರ ಪತ್ರ
ರೈಲ್ವೆ ಪ್ರಯಾಣ ದರ ಕಡಿಮೆ ಇರುವುದರಿಂದ ಹಾಗೂ ಒಂದೇ ಬಾರಿಗೆ ಅಧಿಕ ಜನರು ಪ್ರಯಾಣಿಸಲು ಅವಕಾಶವಿರುವುದರಿಂದ ಹೆಚ್ಚಿನ ಜನರು ರೈಲ್ವೆ ಸಾರಿಗೆಯನ್ನು ಬಳಸುತ್ತಾರೆ. ರೈಲ್ವೆ ಇಲಾಖೆಯೂ ಸಾಕಷ್ಟು ತಂತ್ರಾಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ. ಇಂತಹ ತಂತ್ರಾಂಶಗಳಲ್ಲಿ “ವೇರ್ ಇಸ್ ಮೈ ಟೈನ್’ (Where is My Train) ಆ್ಯಪ್ ಕೂಡ ಒಂದು. ಅನೇಕ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುವಾಗ ತಾವು ಪ್ರಯಾಣಿಸುವ ರೈಲು ಎಲ್ಲಿ ಹೋಗುತ್ತಿದೆ? ಮುಂದಿನ ನಿಲ್ದಾಣ ಯಾವುದು? ಎಂದು ತಿಳಿಯಲು ಈ ಆ್ಯಪ್ ಬಳಸುತ್ತಾರೆ. ಆದರೆ ಇತ್ತೀಚೆಗೆ ಈ ಆ್ಯಪ್ನಲ್ಲಿ ಸಮಸ್ಯೆಗಳು ಸೃಷ್ಟಿಯಾಗಿದ್ದು, ಕೆಲ ಬಾರಿ ರೈಲಿನ ಲೊಕೇಷನ್ ಅನ್ನು ಸರಿಯಾಗಿ ತೋರಿಸುತ್ತಿಲ್ಲ. 12ರಂದು ಇದೇ ಸಮಸ್ಯೆಯಾಗಿತ್ತು. ಸಂಜೆ 7.50ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮೂರನೇ ಪ್ಲಾಟ್ ಫಾರಂನಿಂದ ಹೊರಟಿತ್ತು. ಆದರೆ ವೇರ್ ಈಸ್ ಮೈ ಟೈನ್’ ಆ್ಯಪ್ನಲ್ಲಿ ರೈಲು ನಾಲ್ಕನೇ ಪ್ಲಾಟ್ ಫಾರಂನಲ್ಲಿ ಇರುವುದಾಗಿ ತೋರಿಸುತ್ತಿತ್ತು. ಇದರಿಂದಾಗಿ ಪ್ರಯಾಣಿಕರು ಗೊಂದಲಕ್ಕೀಡಾದರು. ಆದ್ದರಿಂದ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…