Andolana originals

ಓದುಗರ ಪತ್ರ: ರೈಲ್ವೆ ತಂತ್ರಾಂಶದಲ್ಲಿ ದೋಷ

ರೈಲ್ವೆ ಪ್ರಯಾಣ ದರ ಕಡಿಮೆ ಇರುವುದರಿಂದ ಹಾಗೂ ಒಂದೇ ಬಾರಿಗೆ ಅಧಿಕ ಜನರು ಪ್ರಯಾಣಿಸಲು ಅವಕಾಶವಿರುವುದರಿಂದ ಹೆಚ್ಚಿನ ಜನರು ರೈಲ್ವೆ ಸಾರಿಗೆಯನ್ನು ಬಳಸುತ್ತಾರೆ. ರೈಲ್ವೆ ಇಲಾಖೆಯೂ ಸಾಕಷ್ಟು ತಂತ್ರಾಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ. ಇಂತಹ ತಂತ್ರಾಂಶಗಳಲ್ಲಿ “ವೇರ್ ಇಸ್ ಮೈ ಟೈನ್’ (Where is My Train) ಆ್ಯಪ್ ಕೂಡ ಒಂದು. ಅನೇಕ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುವಾಗ ತಾವು ಪ್ರಯಾಣಿಸುವ ರೈಲು ಎಲ್ಲಿ ಹೋಗುತ್ತಿದೆ? ಮುಂದಿನ ನಿಲ್ದಾಣ ಯಾವುದು? ಎಂದು ತಿಳಿಯಲು ಈ ಆ್ಯಪ್ ಬಳಸುತ್ತಾರೆ. ಆದರೆ ಇತ್ತೀಚೆಗೆ ಈ ಆ್ಯಪ್‌ನಲ್ಲಿ ಸಮಸ್ಯೆಗಳು ಸೃಷ್ಟಿಯಾಗಿದ್ದು, ಕೆಲ ಬಾರಿ ರೈಲಿನ ಲೊಕೇಷನ್‌ ಅನ್ನು ಸರಿಯಾಗಿ ತೋರಿಸುತ್ತಿಲ್ಲ. 12ರಂದು ಇದೇ ಸಮಸ್ಯೆಯಾಗಿತ್ತು. ಸಂಜೆ 7.50ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮೂರನೇ ಪ್ಲಾಟ್ ಫಾರಂನಿಂದ ಹೊರಟಿತ್ತು. ಆದರೆ ವೇರ್ ಈಸ್ ಮೈ ಟೈನ್‌’ ಆ್ಯಪ್‌ನಲ್ಲಿ ರೈಲು ನಾಲ್ಕನೇ ಪ್ಲಾಟ್ ಫಾರಂನಲ್ಲಿ ಇರುವುದಾಗಿ ತೋರಿಸುತ್ತಿತ್ತು. ಇದರಿಂದಾಗಿ ಪ್ರಯಾಣಿಕರು ಗೊಂದಲಕ್ಕೀಡಾದರು. ಆದ್ದರಿಂದ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

24 mins ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

33 mins ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

2 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

3 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

7 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

7 hours ago