ಓದುಗರ ಪತ್ರ
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ. ಈ ಕಾಲುವೆ ಎಡ ಭಾಗದಿಂದ ಸಾಗುವ ರಸ್ತೆ ಮಾರ್ಗವು ಶಾಂತವೇರಿ ಗೋಪಾಲಗೌಡ ನಗರ, ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ಯಾಂದಳ್ಳಿ ಬಡಾವಣೆಗೆ ಸಂಪರ್ಕ ಕಲ್ಪಿಸುತ್ತದೆ. ಇವೆಲ್ಲ ಹೊಸ ಬಡಾವಣೆಗಳಾಗಿರುವುದರಿಂದ ಹೆಚ್ಚಾಗಿ ಮನೆಗಳು ನಿರ್ಮಾಣವಾಗುತ್ತಿವೆ.
ಈ ಕಾಲುವೆಯ ಪಕ್ಕ ಮಣ್ಣಿನ ರಸ್ತೆಯ ಮೂಲಕವೇ ಪ್ರತಿನಿತ್ಯ ನೂರಾರು ಜನರು ಅದರಲ್ಲೂ ಹೆಚ್ಚಾಗಿ ಜನ ಹೆಚ್ಚಾಗಿ ಕಟ್ಟಡ ಕಾರ್ಮಿಕರು ಸಂಚರಿಸುತ್ತಾರೆ. ವರುಣ ನಾಲೆಯ ಬಳಿ ತಡೆಗೋಡೆ ಹಾಗೂ ಬೀದಿ ದೀಪ ಇಲ್ಲದೇ ತೊಂದರೆಯಾಗಿದೆ. ಆದ್ದರಿಂದ ಅನಾಹುತಗಳು ಸಂಭವಿ ಸುವ ಮುನ್ನವೇ ಸಂಬಂಧಪಟ್ಟವರು ಕೂಡಲೇ ನಾಲೆಗೆ ತಡೆಗೋಡೆ ನಿರ್ಮಿಸಬೇಕು ಹಾಗೂ ಬೀದಿ ದೀಪದ ವ್ಯವಸ್ಥೆ ಕಲ್ಪಿಸಬೇಕು.
-ಅಹಲ್ಯ ಸಿ.ನಾ.ಚಂದ್ರ, ಜನತಾನಗರ, ಮೈಸೂರು
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…