ಮೈಸೂರಿನಲ್ಲಿ ವಿವೇಕಾನಂದ ಸರ್ಕಲ್ ಬಸ್ ನಿಲ್ದಾಣದ ಒಂದು ಬದಿಯಲ್ಲಿ ಮಾತ್ರ ಬಸ್ ತಂಗುದಾಣವಿದ್ದು, ಇನ್ನೊಂದು ಬದಿಯಲ್ಲಿ ಬಸ್ ಶೆಲ್ಟರ್ ಇಲ್ಲದೇ ಪ್ರಯಾಣಿಕರಿಗೆ ಬೇಸಿಗೆ ಹಾಗೂ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಕೂಡಲೇ ವಿವೇಕಾನಂದ ಸರ್ಕಲ್ನ ಇನ್ನೊಂದು ಬದಿಯಲ್ಲಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು





