ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ಶ್ರೀರಂಗ ಎನ್ಕ್ಲೇವ್ನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಲಾ ಸಂಸ್ಥೆಯ ಬಹುತೇಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಬಸ್ಸನ್ನೇ ಅವಲಂಬಿಸಿದ್ದಾರೆ. ಜಲ್ ಮಹಲ್ ಗೇಟ್ ಬಳಿ ಯಾವುದೇ ಬಸ್ ಶೆಲ್ಟರ್ ಇಲ್ಲದ ಕಾರಣ ಪ್ರತಿನಿತ್ಯ ಬಿಸಿಲಿನಲ್ಲಿ ನಿಂತು ಬಸ್ಸಿಗಾಗಿ ಕಾಯುವುದು, ಇಲ್ಲವೇ ರಸ್ತೆಯ ಮತ್ತೊಂದು ಬದಿಯಲ್ಲಿರುವ ಮರಗಳನ್ನು ಆಶ್ರಯಿಸಿ ಬಸ್ಸಿಗಾಗಿ ಕಾಯುವುದು ಅನಿವಾರ್ಯವಾಗಿದೆ. ಮಳೆಗಾಲದ ಸಂದರ್ಭದಲ್ಲಿ ಇಲ್ಲಿ ನಿಲ್ಲುವುದು ಹೆಚ್ಚು ಸುರಕ್ಷಿತವಲ್ಲ.
ಈ ಮಾರ್ಗದಲ್ಲಿ ಬಸ್ಗಳ ಸಂಖ್ಯೆ ವಿರಳವಾಗಿದ್ದು, ವಿದ್ಯಾರ್ಥಿಗಳು ಕೆಲವೊಮ್ಮೆ ಗಂಟೆಗಟ್ಟಲೆ ಕಾಯುವುದು ಅನಿವಾರ್ಯವಾಗಿದೆ. ಆದ್ದರಿಂದ ಸ್ಥಳೀಯ ಶಾಸಕರು ಮತ್ತು ಸಂಬಂಧಪಟ್ಟ ಇಲಾಖಾ ಅಽಕಾರಿಗಳು ಇದನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಂಡು, ಈ ಕಾನೂನು ಕಾಲೇಜಿನ ಸಮೀಪ ಹೊಸದಾಗಿ ಬಸ್ ಶೆಲ್ಟರ್ ನಿರ್ಮಿಸಬೇಕು ಹಾಗೂ ಆ ಸ್ಥಳದಲ್ಲಿ ಬಸ್ ನಿಲುಗಡೆಯಾಗುವಂತೆ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…
ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…