ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ಶ್ರೀರಂಗ ಎನ್ಕ್ಲೇವ್ನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಲಾ ಸಂಸ್ಥೆಯ ಬಹುತೇಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಬಸ್ಸನ್ನೇ ಅವಲಂಬಿಸಿದ್ದಾರೆ. ಜಲ್ ಮಹಲ್ ಗೇಟ್ ಬಳಿ ಯಾವುದೇ ಬಸ್ ಶೆಲ್ಟರ್ ಇಲ್ಲದ ಕಾರಣ ಪ್ರತಿನಿತ್ಯ ಬಿಸಿಲಿನಲ್ಲಿ ನಿಂತು ಬಸ್ಸಿಗಾಗಿ ಕಾಯುವುದು, ಇಲ್ಲವೇ ರಸ್ತೆಯ ಮತ್ತೊಂದು ಬದಿಯಲ್ಲಿರುವ ಮರಗಳನ್ನು ಆಶ್ರಯಿಸಿ ಬಸ್ಸಿಗಾಗಿ ಕಾಯುವುದು ಅನಿವಾರ್ಯವಾಗಿದೆ. ಮಳೆಗಾಲದ ಸಂದರ್ಭದಲ್ಲಿ ಇಲ್ಲಿ ನಿಲ್ಲುವುದು ಹೆಚ್ಚು ಸುರಕ್ಷಿತವಲ್ಲ.
ಈ ಮಾರ್ಗದಲ್ಲಿ ಬಸ್ಗಳ ಸಂಖ್ಯೆ ವಿರಳವಾಗಿದ್ದು, ವಿದ್ಯಾರ್ಥಿಗಳು ಕೆಲವೊಮ್ಮೆ ಗಂಟೆಗಟ್ಟಲೆ ಕಾಯುವುದು ಅನಿವಾರ್ಯವಾಗಿದೆ. ಆದ್ದರಿಂದ ಸ್ಥಳೀಯ ಶಾಸಕರು ಮತ್ತು ಸಂಬಂಧಪಟ್ಟ ಇಲಾಖಾ ಅಽಕಾರಿಗಳು ಇದನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಂಡು, ಈ ಕಾನೂನು ಕಾಲೇಜಿನ ಸಮೀಪ ಹೊಸದಾಗಿ ಬಸ್ ಶೆಲ್ಟರ್ ನಿರ್ಮಿಸಬೇಕು ಹಾಗೂ ಆ ಸ್ಥಳದಲ್ಲಿ ಬಸ್ ನಿಲುಗಡೆಯಾಗುವಂತೆ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…