ನಂಜನಗೂಡು ಕೇಂದ್ರ ಬಸ್ ನಿಲ್ದಾಣ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ಹೋಗುವಕೆಎಸ್ಆರ್ಟಿಸಿ ಬಸ್ಗಳು ಹಾಗೂ ಕೆಲ ಖಾಸಗಿ ಬಸ್ಗಳು ನಂಜನಗೂಡು ಕೈಗಾರಿಕಾ ಪ್ರದೇಶದ ಸಮೀಪ ನಿಲುಗಡೆ ನೀಡುತ್ತಿದ್ದು, ಈ ಭಾಗದಲ್ಲಿ ಬಸ್ ತಂಗುದಾಣವಿಲ್ಲದ ಪರಿಣಾಮ ಜನರು ಬಿಸಿಲು, ಮಳೆಯಲ್ಲಿಯೇ ನಿಂತು ಬಸ್ಗಾಗಿ ಕಾಯಬೇಕಾಗಿದೆ.
ಕನಕನಗರ, ಕತ್ವಾಡಿಪುರ ಸೇರಿದಂತೆ ಇಂಡಸ್ಟ್ರಿಯಲ್ ಏರಿಯಾ ಸುತ್ತಮುತ್ತಲ ಕೂಲಿ ಕಾರ್ಮಿಕರು, ನೌಕರರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ತಮ್ಮ ದಿನನಿತ್ಯದ ಕೆಲಸ ಕಾರ್ಯಗಳಿಗಾಗಿ ಮೈಸೂರಿಗೆ ಹೋಗಿಬರಲು ಇಲ್ಲಿಯೇ ನಿಂತು ಬಸ್ಗಾಗಿ ಕಾಯುತ್ತಾರೆ. ಆದರೆ, ಇಲ್ಲಿ ಬಸ್ ತಂಗುದಾಣವಿಲ್ಲದ ಪರಿಣಾಮ ಅವರು, ಬಿಸಿಲು, ಮಳೆಯಲ್ಲಿಯೇ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಕ್ಷೇತ್ರದ ಶಾಸಕರು ಈ ಬಗ್ಗೆ ಗಮನಹರಿಸಿ ನಂಜನಗೂಡು ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಿಕೊಡಬೇಕಿದೆ.
-ಅನಿಲ್ ಕುಮಾರ್, ನಂಜನಗೂಡು.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…