ಓದುಗರ ಪತ್ರ
ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆಯ ಬನಶಂಕರಿ ದೇವಸ್ಥಾನದ ಸಮೀಪ ಇರುವ ಸರ್ಕಲ್ನಲ್ಲಿ ವಾಹನ ದಟ್ಟಣೆ ಯಾವಾಗಲೂ ಹೆಚ್ಚಾಗಿರುತ್ತದೆ. ಶಿವನ ದೇವಾಲಯದ ಕಡೆಯಿಂದಬರುವ ವಾಹನಗಳು ಮತ್ತು ಕೆಎಸ್ಆರ್ಟಿಸಿ ಡಿಪೋ ಕಡೆಯಿಂದ ಬರುವ ಎಲ್ಲಾ ವಾಹನಗಳು ಈ ಸರ್ಕಲ್ ಮುಖಾಂತರವೇ ಹಾದು ಹೋಗುವುದರಿಂದ ಈ ಸರ್ಕಲ್ ಬಳಿ ಪದೇ-ಪದೇ ಅಪಘಾತಗಳು ಸಂಭವಿಸುತ್ತವೆ.
ಕಳೆದ ವಾರವಷ್ಟೇ ಇಲ್ಲಿ ಅಪಘಾತ ಸಂಭವಿಸಿ ವಾಹನ ಸವಾರರು ಮೃತಪಟ್ಟಿದ್ದಾರೆ. ಬನಶಂಕರಿ ದೇವಸ್ಥಾನದ ಮುಂಭಾಗದಲ್ಲಿ ರಸ್ತೆ ಉಬ್ಬು ನಿರ್ಮಿಸುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕಿದೆ. ಈ ಬಗ್ಗೆ ನಗರಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…