Andolana originals

ಓದುಗರ ಪತ್ರ: ಬಂಡಿಪಾಳ್ಯದಲ್ಲಿ ಅಗತ್ಯ ಶೌಚಾಲಯಗಳನ್ನು ನಿರ್ಮಿಸಿ

ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ ಇಲ್ಲವೆ ಇತರೆ ಕಾರ್ಯಕ್ರಮಗಳನ್ನು ಆಯೋಜಿಸುವವರು ಬರುತ್ತಾರೆ.

ಹಾಗೆಯೇ ರೈತರು, ತರಕಾರಿ ಹಾಗೂ ದವಸ ಧಾನ್ಯಗಳನ್ನು ಮಾರಾಟ ಮಾಡಲು ಬರುತ್ತಾರೆ. ಲೋಡರ್ಸ್‌ಗಳು ಕೂಲಿ ಕೆಲಸಕ್ಕೆ ಬರುತ್ತಾರೆ. ದಿನನಿತ್ಯ ಅಧಿಕ ಸಂಖ್ಯೆಯಲ್ಲಿ ಜನರು ಬಂದು ಹೋಗುವ ಈ ಪ್ರದೇಶದಲ್ಲಿ ಶೌಚಾಲಯಗಳ ಕೊರತೆ ಕಂಡುಬರುತ್ತಿದೆ. ಇರುವ ಮೂರ‍್ನಾಲ್ಕು ಶೌಚಾಲಯಗಳೂ ಬಾಗಿಲು ಬಂದ್ ಆಗಿರುತ್ತವೆ. ಇದರಿಂದ ಸಾರ್ವಜನಿಕರಿಗೆ ಶೌಚಾಲಯ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ಇದೆ. ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಮನುಷ್ಯನಿಗೆ ಅತ್ಯವಶ್ಯಕವಾದ ಶೌಚಾಲಯಗಳನ್ನು ಜನರ ಅವಶ್ಯಕತೆಗೆ ತಕ್ಕಂತೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಜತೆಗೆ ಈ ಶೌಚಾಲಯಗಳ ಬಾಗಿಲುಗಳು ತೆರೆದಿರುವಂತೆ ಹಾಗೂ ಸ್ವಚ್ಛತೆಯಿಂದ ಇರುವಂತೆ ನೋಡಿಕೊಳ್ಳುವುದೂ ಅತ್ಯಗತ್ಯವಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ. ಕೋಟೆ ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

1 hour ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

2 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

3 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

4 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

9 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

9 hours ago