ನಂಜನಗೂಡು ತಾಲ್ಲೂಕಿನ ಈಶ್ವರಗೌಡನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಸಜ್ಜಿತ ಶೌಚಾಲಯವಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇಲ್ಲಿನ ಶೌಚಾಲಯ ತೀರಾ ಹದಗೆಟ್ಟು ಹೋಗಿದ್ದು, ಕುಸಿಯುವ ಹಂತ
ತಲುಪಿದೆ. ಅಲ್ಲದೆ ನೀರಿನ ವ್ಯವಸ್ಥೆ ಇಲ್ಲದೆ ದುರ್ವಾಸನೆ ಬೀರಲಾರಂಭಿಸಿದ್ದು, ಶೌಚಾಲಯದ ಬಾಗಿಲುಗಳು ಕಿತ್ತುಬಂದಿದ್ದರೂ ವಿದ್ಯಾರ್ಥಿಗಳು ವಿಧಿ ಇಲ್ಲದೆ ಇದೇ ಶೌಚಾಲಯವನ್ನು ಬಳಸುವಂತಾಗಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ಎಲ್ಲರೂ ಕಡ್ಡಾಯವಾಗಿ ಶೌಚಾಲಯಗಳನ್ನು ಬಳಸಬೇಕು ಎಂದು ಬೋಧಿಸುತ್ತಾರೆ. ಆದರೆ ಶಾಲೆಯಲ್ಲಿಯ ಶೌಚಾಲಯಗಳ ಪರಿಸ್ಥಿತಿಯೇ ಹೀಗಾದರೆ ವಿದ್ಯಾರ್ಥಿಗಳು ಸ್ವಚ್ಛತೆಯ ಪಾಠ ಕಲಿಯುವುದಾದರೂ ಹೇಗೆ? ಇದು ಇದೊಂದೇ ಶಾಲೆಯ ಸಮಸ್ಯೆಯಲ್ಲ. ತಾಲ್ಲೂಕಿನ ಅನೇಕ ಶಾಲೆಗಳಲ್ಲಿ ಇದೇ ಸಮಸ್ಯೆ ತಲೆದೋರಿದ್ದು, ಕೆಲ ಶಾಲೆಗಳಲ್ಲಿ ಶೌಚಾಲಯಗಳು ಅನೈರ್ಮಲ್ಯದಿಂದ ಕೂಡಿದ್ದರೆ, ಅನೇಕ ಶಾಲೆಗಳಲ್ಲಿ ನೀರಿನ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಸಂಕಷ್ಟಪಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಸರ್ಕಾರಿ ಶಾಲೆಗಳಿಗೆ ಸೂಕ್ತ ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಬೇಕಿದೆ.
-ಡಿ.ಅಂಬಿಕಾ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…