ಓದುಗರ ಪತ್ರ
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ ಜನರನ್ನು ನಿಯಂತ್ರಿಸಲು ಕೆಲವು ನಿಲ್ದಾಣಗಳಲ್ಲಿ ಚಾಲಕರು ಬಸ್ ನಿಲ್ಲಿಸದೇ ಹೋಗುವುದೂ ಉಂಟು. ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಗಮ್ಯ ಸ್ಥಾನ ತಲುಪಲು ತೊಂದರೆಯಾಗುತ್ತಿದೆ. ಹಾಗೂ ಕೆಎಸ್ಆರ್ಟಿಸಿ ಬಸ್ನ ಕೆಲವು ನಿರ್ವಾಹಕರು ತಮ್ಮ ಬಸ್ಸಿನಲ್ಲಿ ಪ್ರಯಾಣಿಸುವ ವಯೋವೃದ್ಧರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರನ್ನು ಬಸ್ ಹತ್ತುವಾಗ ಇಳಿಯುವಾಗ ಏಕವಚನದಲ್ಲಿ ಗದರುವುದು, ಟಿಕೆಟ್ ಪಡೆದ ಪ್ರಯಾಣಿಕರಿಗೆ ಸರಿಯಾಗಿ ಚಿಲ್ಲರೆ ನೀಡದೆ ಇಳಿಯುವಾಗ ಚಿಲ್ಲರೆ ಪಡೆದುಕೊಳ್ಳಿ ಎಂಬ ಮಾತು ಹೇಳಿ ಆಗಲೂ ಸರಿಯಾಗಿ ಕೊಡಬೇಕಾದ ಚಿಲ್ಲರೆ ಹಣ ನೀಡದೆ ಪ್ರಯಾಣಿಕರನ್ನೇ ಸತಾಯಿಸುತ್ತಾರೆ. ಇದರಿಂದ ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ಜಗಳ ಉಂಟಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸುವ ನಿರ್ವಾಹಕರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ಪ್ರಯಾಣಿಕರೊಂದಿಗೆ ಸೌಜನ್ಯವಾಗಿ ವರ್ತಿಸಲು ಸೂಚನೆ ನೀಡಬೇಕಿದೆ.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ , ಚಾಮರಾಜನಗರ ತಾ
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…
ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…