ಓದುಗರ ಪತ್ರ
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ ಜನರನ್ನು ನಿಯಂತ್ರಿಸಲು ಕೆಲವು ನಿಲ್ದಾಣಗಳಲ್ಲಿ ಚಾಲಕರು ಬಸ್ ನಿಲ್ಲಿಸದೇ ಹೋಗುವುದೂ ಉಂಟು. ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಗಮ್ಯ ಸ್ಥಾನ ತಲುಪಲು ತೊಂದರೆಯಾಗುತ್ತಿದೆ. ಹಾಗೂ ಕೆಎಸ್ಆರ್ಟಿಸಿ ಬಸ್ನ ಕೆಲವು ನಿರ್ವಾಹಕರು ತಮ್ಮ ಬಸ್ಸಿನಲ್ಲಿ ಪ್ರಯಾಣಿಸುವ ವಯೋವೃದ್ಧರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರನ್ನು ಬಸ್ ಹತ್ತುವಾಗ ಇಳಿಯುವಾಗ ಏಕವಚನದಲ್ಲಿ ಗದರುವುದು, ಟಿಕೆಟ್ ಪಡೆದ ಪ್ರಯಾಣಿಕರಿಗೆ ಸರಿಯಾಗಿ ಚಿಲ್ಲರೆ ನೀಡದೆ ಇಳಿಯುವಾಗ ಚಿಲ್ಲರೆ ಪಡೆದುಕೊಳ್ಳಿ ಎಂಬ ಮಾತು ಹೇಳಿ ಆಗಲೂ ಸರಿಯಾಗಿ ಕೊಡಬೇಕಾದ ಚಿಲ್ಲರೆ ಹಣ ನೀಡದೆ ಪ್ರಯಾಣಿಕರನ್ನೇ ಸತಾಯಿಸುತ್ತಾರೆ. ಇದರಿಂದ ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ಜಗಳ ಉಂಟಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸುವ ನಿರ್ವಾಹಕರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ಪ್ರಯಾಣಿಕರೊಂದಿಗೆ ಸೌಜನ್ಯವಾಗಿ ವರ್ತಿಸಲು ಸೂಚನೆ ನೀಡಬೇಕಿದೆ.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ , ಚಾಮರಾಜನಗರ ತಾ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…