Andolana originals

ಓದುಗರ ಪತ್ರ: ಗುಣಮಟ್ಟದ ಔಷಧ ಖರೀದಿಸಿ

ಬಿಮ್ಸ್ ಆಸ್ಪತ್ರೆಯಲ್ಲಿ ನಾಲ್ವರು ಗರ್ಭಿಣಿಯರು ಸಾವನ್ನಪ್ಪಿದ್ದು, ಈ ಸಾವಿಗೆ ನಕಲಿ ಔಷಽಯೇ ಕಾರಣ ಎಂದು ಪಶ್ಚಿಮ ಬಂಗಾಳದ ಫಾರ್ಮಸುಟಿಕಲ್ಸ್ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಅದರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೆ ರಾಜ್ಯದ ಔಷಧ ನಿಯಂತ್ರಕ ಉಮೇಶ್ ಅವರನ್ನು ಅಮಾನತ್ತು ಮಾಡಿದೆ ಎಂಬುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ.

ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಮತ್ತು ಆರೋಗ್ಯ ಕೇಂದ್ರಗಳಿಗೆ ಆರೋಗ್ಯ ಇಲಾಖೆಯು ಕೆಎಸ್‌ಎಂಸಿಎಲ್ ನಿಗಮದಿಂದ ಟೆಂಡರ್ ಮೂಲಕ ಔಷಧಗಳನ್ನು ಪೂರೈಸುತ್ತದೆ. ಯಾವಾಗ ಬಿಮ್ಸ್ ಆಸ್ಪತ್ರೆಯಲ್ಲಿ ಗರ್ಭಿಣಿಯರು ಸಾವನ್ನಪ್ಪಿದರೋ ಕೂಡಲೇ ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿಯ ಜಿಲ್ಲಾ ಔಷಧ ಉಗ್ರಾಣದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿ ಅವಧಿ ಮೀರಿ ಎರಡು ವರ್ಷಗಳಾಗಿರುವ

ಔಷಧಗಳೂ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಅವಧಿ ಮೀರಿದ ಔಷಧಗಳ ವಿಲೇವಾರಿಗೆ ಮೇಲಧಿಕಾರಿಗಳು ಸರಿಯಾದ ಮಾರ್ಗಸೂಚಿ ನೀಡದಿರುವುದೇ ಅವು ಉಗ್ರಾಣದಲ್ಲಿಯೇ ಉಳಿಯಲು ಕಾರಣವಾಗಿದೆ ಎಂಬುದು ಇಲ್ಲಿನ ಸಿಬ್ಬಂದಿಗಳ ಆರೋಪ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಟೆಂಡರ್ ಇಲ್ಲದೆ ನೇರವಾಗಿ ಔಷಧಗಳನ್ನು ಖರೀದಿ ಮಾಡುವುದರಿಂದ ಗುಣಮಟ್ಟದ ಔಷಧಗಳ ಪೂರೈಕೆಯಾಗುತ್ತದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲ ಭ್ರಷ್ಟ ಅಧಿಕಾರಿಗಳು ಕಮಿಷನ್ ಆಸೆಗಾಗಿ ಕಳಪೆ ಔಷಧಗಳನ್ನು ಹೆಚ್ಚು ಬೆಲೆಗೆ ಖರೀದಿ ಮಾಡುತ್ತಿದ್ದಾರೆ. ಇದರಿಂದಾಗಿ ಇಂತಹ ಅನಾಹುತಗಳು ಉಂಟಾಗುತ್ತವೆ.

ಸದ್ಯ ತಮಿಳುನಾಡು ಸರ್ಕಾರ ಮಾದರಿ ಔಷಧ ಖರೀದಿ ಪ್ರಕ್ರಿಯೆಯನ್ನು ಜಾರಿಗೆ ತರಲು ಚಿಂತಿಸುತ್ತಿರುವುದಾಗಿ ವರದಿಯಾಗಿದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಸ್ವಯತ್ತ ಆಸ್ಪತ್ರೆಗಳಿಗೆ ಪಾರದರ್ಶಕ ಔಷಧ ಖರೀದಿ ನೀತಿಯನ್ನು ಅಳವಡಿಸಿಕೊಳ್ಳುವ ಮೂಲಕ ಕಮಿಷನ್ ದಂಧೆಗೆ ಕಡಿವಾಣ ಹಾಕಬೇಕಿದೆ.

-ಮುಳ್ಳೂರು ಪ್ರಕಾಶ್, ನಿವೃತ್ತ ಹಿರಿಯ ಫಾರ್ಮಸಿ ಅಧಿಕಾರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

9 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

10 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

10 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago