ಓದುಗರ ಪತ್ರ
ರಹಿತ ಪಾವತಿ ವ್ಯವಸ್ಥೆ ಮಾಡಿ ಮೈಸೂರು ನಗರ ಪಾಲಿಕೆ ವತಿಯಿಂದ ನಗರದ ಹಲವು ಬಡಾವಣೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ (ಆರ್ಒ ಪ್ಲಾಂಟ್)ಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ೫ ರೂಪಾಯಿಯ ಹೊಸ ನಾಣ್ಯವನ್ನು ಹಾಕಿದಾಗ ಮಾತ್ರ ಸಾರ್ವಜನಿಕರು ನೀರು ಪಡೆಯ ಬಹುದಾಗಿದೆ. ಬಹುತೇಕ ಸಾರ್ವಜನಿಕರು ೫ ರೂಪಾಯಿ ನಾಣ್ಯಕ್ಕಾಗಿ ರಸ್ತೆಯಲ್ಲಿ ಓಡಾಡುವ ಜನರನ್ನು, ಇಲ್ಲ ಅಕ್ಕ- ಪಕ್ಕದ ಅಂಗಡಿಗಳಿಗೆ ಹೋಗಿ ನಾಣ್ಯ ಪಡೆಯುವ ಪರಿಸ್ಥಿತಿ ಇದೆ. ಸಾಮಾನ್ಯವಾಗಿ, ಎಲ್ಲರ ಮನೆಯಲ್ಲೂ ಹಿರಿಯ ನಾಗರಿಕರೇ ನೀರು ತೆಗೆದುಕೊಂಡು ಬರುವ ಪರಿಸ್ಥಿತಿ ಇದೆ. ೫ ರೂಪಾಯಿ ನಾಣ್ಯಕ್ಕಾಗಿ ಬೇರೆಯವರನ್ನು ಕೇಳುವುದು ಅವರಿಗೆ ಒಂದು ರೀತಿಯಲ್ಲಿ ಮುಜುಗರವೂ ಆಗಬಹುದು. ತಂತ್ರಜ್ಞಾನ ಇಷ್ಟು ಮುಂದುವರಿದಿದ್ದರೂ ಮೈಸೂರು ನಗರ ಪಾಲಿಕೆಯವರು, ಇನ್ನೂ ಓಬಿರಾಯನ ಕಾಲದಲ್ಲೇ ಇದ್ದಾರೆ. ನಾಣ್ಯದ ವ್ಯವಸ್ಥೆಯ ಬದಲಾಗಿ ಫೋನ್ ಪೇ ಅಥವಾ ಗೂಗಲ್ ಪೇ ಅಥವಾ ಕಾರ್ಡ್ ಸ್ವೈಪಿಂಗ್ ವ್ಯವಸ್ಥೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ, ನಗರ ಪಾಲಿಕೆಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…