ಓದುಗರ ಪತ್ರ
ರಹಿತ ಪಾವತಿ ವ್ಯವಸ್ಥೆ ಮಾಡಿ ಮೈಸೂರು ನಗರ ಪಾಲಿಕೆ ವತಿಯಿಂದ ನಗರದ ಹಲವು ಬಡಾವಣೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ (ಆರ್ಒ ಪ್ಲಾಂಟ್)ಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ೫ ರೂಪಾಯಿಯ ಹೊಸ ನಾಣ್ಯವನ್ನು ಹಾಕಿದಾಗ ಮಾತ್ರ ಸಾರ್ವಜನಿಕರು ನೀರು ಪಡೆಯ ಬಹುದಾಗಿದೆ. ಬಹುತೇಕ ಸಾರ್ವಜನಿಕರು ೫ ರೂಪಾಯಿ ನಾಣ್ಯಕ್ಕಾಗಿ ರಸ್ತೆಯಲ್ಲಿ ಓಡಾಡುವ ಜನರನ್ನು, ಇಲ್ಲ ಅಕ್ಕ- ಪಕ್ಕದ ಅಂಗಡಿಗಳಿಗೆ ಹೋಗಿ ನಾಣ್ಯ ಪಡೆಯುವ ಪರಿಸ್ಥಿತಿ ಇದೆ. ಸಾಮಾನ್ಯವಾಗಿ, ಎಲ್ಲರ ಮನೆಯಲ್ಲೂ ಹಿರಿಯ ನಾಗರಿಕರೇ ನೀರು ತೆಗೆದುಕೊಂಡು ಬರುವ ಪರಿಸ್ಥಿತಿ ಇದೆ. ೫ ರೂಪಾಯಿ ನಾಣ್ಯಕ್ಕಾಗಿ ಬೇರೆಯವರನ್ನು ಕೇಳುವುದು ಅವರಿಗೆ ಒಂದು ರೀತಿಯಲ್ಲಿ ಮುಜುಗರವೂ ಆಗಬಹುದು. ತಂತ್ರಜ್ಞಾನ ಇಷ್ಟು ಮುಂದುವರಿದಿದ್ದರೂ ಮೈಸೂರು ನಗರ ಪಾಲಿಕೆಯವರು, ಇನ್ನೂ ಓಬಿರಾಯನ ಕಾಲದಲ್ಲೇ ಇದ್ದಾರೆ. ನಾಣ್ಯದ ವ್ಯವಸ್ಥೆಯ ಬದಲಾಗಿ ಫೋನ್ ಪೇ ಅಥವಾ ಗೂಗಲ್ ಪೇ ಅಥವಾ ಕಾರ್ಡ್ ಸ್ವೈಪಿಂಗ್ ವ್ಯವಸ್ಥೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ, ನಗರ ಪಾಲಿಕೆಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…
ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…