ಓದುಗರ ಪತ್ರ
ರಹಿತ ಪಾವತಿ ವ್ಯವಸ್ಥೆ ಮಾಡಿ ಮೈಸೂರು ನಗರ ಪಾಲಿಕೆ ವತಿಯಿಂದ ನಗರದ ಹಲವು ಬಡಾವಣೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ (ಆರ್ಒ ಪ್ಲಾಂಟ್)ಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ೫ ರೂಪಾಯಿಯ ಹೊಸ ನಾಣ್ಯವನ್ನು ಹಾಕಿದಾಗ ಮಾತ್ರ ಸಾರ್ವಜನಿಕರು ನೀರು ಪಡೆಯ ಬಹುದಾಗಿದೆ. ಬಹುತೇಕ ಸಾರ್ವಜನಿಕರು ೫ ರೂಪಾಯಿ ನಾಣ್ಯಕ್ಕಾಗಿ ರಸ್ತೆಯಲ್ಲಿ ಓಡಾಡುವ ಜನರನ್ನು, ಇಲ್ಲ ಅಕ್ಕ- ಪಕ್ಕದ ಅಂಗಡಿಗಳಿಗೆ ಹೋಗಿ ನಾಣ್ಯ ಪಡೆಯುವ ಪರಿಸ್ಥಿತಿ ಇದೆ. ಸಾಮಾನ್ಯವಾಗಿ, ಎಲ್ಲರ ಮನೆಯಲ್ಲೂ ಹಿರಿಯ ನಾಗರಿಕರೇ ನೀರು ತೆಗೆದುಕೊಂಡು ಬರುವ ಪರಿಸ್ಥಿತಿ ಇದೆ. ೫ ರೂಪಾಯಿ ನಾಣ್ಯಕ್ಕಾಗಿ ಬೇರೆಯವರನ್ನು ಕೇಳುವುದು ಅವರಿಗೆ ಒಂದು ರೀತಿಯಲ್ಲಿ ಮುಜುಗರವೂ ಆಗಬಹುದು. ತಂತ್ರಜ್ಞಾನ ಇಷ್ಟು ಮುಂದುವರಿದಿದ್ದರೂ ಮೈಸೂರು ನಗರ ಪಾಲಿಕೆಯವರು, ಇನ್ನೂ ಓಬಿರಾಯನ ಕಾಲದಲ್ಲೇ ಇದ್ದಾರೆ. ನಾಣ್ಯದ ವ್ಯವಸ್ಥೆಯ ಬದಲಾಗಿ ಫೋನ್ ಪೇ ಅಥವಾ ಗೂಗಲ್ ಪೇ ಅಥವಾ ಕಾರ್ಡ್ ಸ್ವೈಪಿಂಗ್ ವ್ಯವಸ್ಥೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ, ನಗರ ಪಾಲಿಕೆಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…