Andolana originals

ಓದುಗರ ಪತ್ರ: ಜಾತಿ ಗಣತಿ ವರದಿ: ಬಿಡುಗಡೆಯ ನಂತರ ಚರ್ಚೆಯಾಗಲಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಮಾತನ್ನು ನಾನು ಒಪ್ಪುತ್ತೇನೆ. ನಾನು ಕರ್ನಾಟಕ ವಿಧಾನಪರಿಷತ್ ಸದಸ್ಯನಾಗಿದ್ದಾಗ ಬಿಜೆಪಿ ಸರ್ಕಾರಕ್ಕೆ ಒಂದು ಸ್ಪಷ್ಟನೆ ನೀಡಿದ್ದೆ. ಆ ಸಂದರ್ಭದಲ್ಲಿ ಕಾನೂನು ಸಚಿವರಾಗಿದ್ದ ಮಾಧುಸ್ವಾಮಿಯವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ಕಾಂತರಾಜು ಅಥವಾ ಸದಾಸಿದ ಕಮಿಟಿ ವರದಿ’ ಎಂಬ ಯಾವುದೇ ದಾಖಲೆಗಳು ಸರ್ಕಾರದಲ್ಲಿ ಇಲ್ಲ ಎಂದು ಹೇಳಿದ್ದರು. ಈ ಮಾತನ್ನು ಕೇಳಿದ ನನಗೆ ಸರ್ಕಾರಗಳು ಯಾವ ರೀತಿಯಾಗಿ ಆಡಳಿತ ನಡೆಸುತ್ತಿವೆ ಎಂಬ ಬಗ್ಗೆ ತಿಳಿದು ಆಘಾತವಾಯಿತು.

1931ರಲ್ಲಿ ಭಾರತದ ಜಾತಿಗಣತಿಯನ್ನು ಬ್ರಿಟಿಷ್ ಸರ್ಕಾರ ಮಾಡಿತ್ತು, ನಂತರ ಯಾವುದೇ ಸರ್ಕಾರಗಳು ಅದನ್ನು ಮಾಡಲಿಲ್ಲ. ಸಮಾಜವಾದಿ ಧುರೀಣ ದಿವಂಗತ ರಾಮ ಮನೋಹರ ಲೋಹಿಯಾ ಈ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಅವರ ಒತ್ತಾಯಕ್ಕೆ ಯಾರೂ ಓಗೊಡಲಿಲ್ಲ.

ಇದೀಗ ರಾಹುಲ್‌ ಗಾಂಧಿ ಮತ್ತು ಆರ್.ಎಸ್‌.ಎಸ್‌ನವರು ಕೂಡ ಜಾತಿಗಣತಿ ಆಗಬೇಕೆಂದು ಹೇಳಿದ್ದಾರೆ. ಕಾಂತರಾಜು ವರದಿ ಎಂದು ಬಿಂಬಿಸುತ್ತಿರುವ ಮತ್ತು 180 ಕೋಟಿ ರೂ. ವ್ಯಯ ಮಾಡಿ ಮಾಡಿರುವ ವರದಿಯನ್ನು ಬಿಡುಗಡೆ ಮಾಡಬೇಕಿದೆ. ಸರ್ಕಾರ ಮತ್ತು ಪ್ರತಿ ಪಕ್ಷಗಳು ವರದಿ ಬಿಡುಗಡೆಯಾದ ನಂತರ ಚರ್ಚೆಯಲ್ಲಿ ತೊಡಗಲಿ, ಬೇಕಿದ್ದರೆ ಆ ನಂತರ ಅದನ್ನು ತಿರಸ್ಕರಿಸಲಿ, ಇದಾಗದಿದ್ದಲ್ಲಿ ಎಲ್ಲ ವರದಿಗಳಿಗೆ ಅಂದರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸರ್ವೆಯ ವರದಿಗಳನ್ನು ಅಪಾರ್ಥ ಮಾಡಿದಂತಾಗುತ್ತದೆ. ಆ ವರದಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಜಾತಿ ಗಣತಿಯ ವರದಿ ಬಿಡುಗಡೆಯಾದರೆ ರವಿವರ್ಮ ಕುಮಾರ್, ದ್ವಾರಕನಾಥ್, ಜಯಪ್ರಕಾಶ್ ಇತರರ ಕಾಳಜಿಯಂತ ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಅನುಕೂಲವಾಗುತ್ತದೆ.

-ಮೋಹನ್ ಕುಮಾರ್ ಕೊಂಡಜ್ಜಿ, ವಿಧಾನ ಪರಿಷತ್ ಮಾಜಿ ಸದಸ್ಯ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

7 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

8 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

9 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

9 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

9 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

9 hours ago