Andolana originals

ಓದುಗರ ಪತ್ರ: ಜಾತಿ ಗಣತಿ ವರದಿ: ಬಿಡುಗಡೆಯ ನಂತರ ಚರ್ಚೆಯಾಗಲಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಮಾತನ್ನು ನಾನು ಒಪ್ಪುತ್ತೇನೆ. ನಾನು ಕರ್ನಾಟಕ ವಿಧಾನಪರಿಷತ್ ಸದಸ್ಯನಾಗಿದ್ದಾಗ ಬಿಜೆಪಿ ಸರ್ಕಾರಕ್ಕೆ ಒಂದು ಸ್ಪಷ್ಟನೆ ನೀಡಿದ್ದೆ. ಆ ಸಂದರ್ಭದಲ್ಲಿ ಕಾನೂನು ಸಚಿವರಾಗಿದ್ದ ಮಾಧುಸ್ವಾಮಿಯವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ಕಾಂತರಾಜು ಅಥವಾ ಸದಾಸಿದ ಕಮಿಟಿ ವರದಿ’ ಎಂಬ ಯಾವುದೇ ದಾಖಲೆಗಳು ಸರ್ಕಾರದಲ್ಲಿ ಇಲ್ಲ ಎಂದು ಹೇಳಿದ್ದರು. ಈ ಮಾತನ್ನು ಕೇಳಿದ ನನಗೆ ಸರ್ಕಾರಗಳು ಯಾವ ರೀತಿಯಾಗಿ ಆಡಳಿತ ನಡೆಸುತ್ತಿವೆ ಎಂಬ ಬಗ್ಗೆ ತಿಳಿದು ಆಘಾತವಾಯಿತು.

1931ರಲ್ಲಿ ಭಾರತದ ಜಾತಿಗಣತಿಯನ್ನು ಬ್ರಿಟಿಷ್ ಸರ್ಕಾರ ಮಾಡಿತ್ತು, ನಂತರ ಯಾವುದೇ ಸರ್ಕಾರಗಳು ಅದನ್ನು ಮಾಡಲಿಲ್ಲ. ಸಮಾಜವಾದಿ ಧುರೀಣ ದಿವಂಗತ ರಾಮ ಮನೋಹರ ಲೋಹಿಯಾ ಈ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಅವರ ಒತ್ತಾಯಕ್ಕೆ ಯಾರೂ ಓಗೊಡಲಿಲ್ಲ.

ಇದೀಗ ರಾಹುಲ್‌ ಗಾಂಧಿ ಮತ್ತು ಆರ್.ಎಸ್‌.ಎಸ್‌ನವರು ಕೂಡ ಜಾತಿಗಣತಿ ಆಗಬೇಕೆಂದು ಹೇಳಿದ್ದಾರೆ. ಕಾಂತರಾಜು ವರದಿ ಎಂದು ಬಿಂಬಿಸುತ್ತಿರುವ ಮತ್ತು 180 ಕೋಟಿ ರೂ. ವ್ಯಯ ಮಾಡಿ ಮಾಡಿರುವ ವರದಿಯನ್ನು ಬಿಡುಗಡೆ ಮಾಡಬೇಕಿದೆ. ಸರ್ಕಾರ ಮತ್ತು ಪ್ರತಿ ಪಕ್ಷಗಳು ವರದಿ ಬಿಡುಗಡೆಯಾದ ನಂತರ ಚರ್ಚೆಯಲ್ಲಿ ತೊಡಗಲಿ, ಬೇಕಿದ್ದರೆ ಆ ನಂತರ ಅದನ್ನು ತಿರಸ್ಕರಿಸಲಿ, ಇದಾಗದಿದ್ದಲ್ಲಿ ಎಲ್ಲ ವರದಿಗಳಿಗೆ ಅಂದರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸರ್ವೆಯ ವರದಿಗಳನ್ನು ಅಪಾರ್ಥ ಮಾಡಿದಂತಾಗುತ್ತದೆ. ಆ ವರದಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಜಾತಿ ಗಣತಿಯ ವರದಿ ಬಿಡುಗಡೆಯಾದರೆ ರವಿವರ್ಮ ಕುಮಾರ್, ದ್ವಾರಕನಾಥ್, ಜಯಪ್ರಕಾಶ್ ಇತರರ ಕಾಳಜಿಯಂತ ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಅನುಕೂಲವಾಗುತ್ತದೆ.

-ಮೋಹನ್ ಕುಮಾರ್ ಕೊಂಡಜ್ಜಿ, ವಿಧಾನ ಪರಿಷತ್ ಮಾಜಿ ಸದಸ್ಯ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago