Andolana originals

ಓದುಗರ ಪತ್ರ: ಜಾತಿ ಗಣತಿ ವರದಿ: ಬಿಡುಗಡೆಯ ನಂತರ ಚರ್ಚೆಯಾಗಲಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಮಾತನ್ನು ನಾನು ಒಪ್ಪುತ್ತೇನೆ. ನಾನು ಕರ್ನಾಟಕ ವಿಧಾನಪರಿಷತ್ ಸದಸ್ಯನಾಗಿದ್ದಾಗ ಬಿಜೆಪಿ ಸರ್ಕಾರಕ್ಕೆ ಒಂದು ಸ್ಪಷ್ಟನೆ ನೀಡಿದ್ದೆ. ಆ ಸಂದರ್ಭದಲ್ಲಿ ಕಾನೂನು ಸಚಿವರಾಗಿದ್ದ ಮಾಧುಸ್ವಾಮಿಯವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ಕಾಂತರಾಜು ಅಥವಾ ಸದಾಸಿದ ಕಮಿಟಿ ವರದಿ’ ಎಂಬ ಯಾವುದೇ ದಾಖಲೆಗಳು ಸರ್ಕಾರದಲ್ಲಿ ಇಲ್ಲ ಎಂದು ಹೇಳಿದ್ದರು. ಈ ಮಾತನ್ನು ಕೇಳಿದ ನನಗೆ ಸರ್ಕಾರಗಳು ಯಾವ ರೀತಿಯಾಗಿ ಆಡಳಿತ ನಡೆಸುತ್ತಿವೆ ಎಂಬ ಬಗ್ಗೆ ತಿಳಿದು ಆಘಾತವಾಯಿತು.

1931ರಲ್ಲಿ ಭಾರತದ ಜಾತಿಗಣತಿಯನ್ನು ಬ್ರಿಟಿಷ್ ಸರ್ಕಾರ ಮಾಡಿತ್ತು, ನಂತರ ಯಾವುದೇ ಸರ್ಕಾರಗಳು ಅದನ್ನು ಮಾಡಲಿಲ್ಲ. ಸಮಾಜವಾದಿ ಧುರೀಣ ದಿವಂಗತ ರಾಮ ಮನೋಹರ ಲೋಹಿಯಾ ಈ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಅವರ ಒತ್ತಾಯಕ್ಕೆ ಯಾರೂ ಓಗೊಡಲಿಲ್ಲ.

ಇದೀಗ ರಾಹುಲ್‌ ಗಾಂಧಿ ಮತ್ತು ಆರ್.ಎಸ್‌.ಎಸ್‌ನವರು ಕೂಡ ಜಾತಿಗಣತಿ ಆಗಬೇಕೆಂದು ಹೇಳಿದ್ದಾರೆ. ಕಾಂತರಾಜು ವರದಿ ಎಂದು ಬಿಂಬಿಸುತ್ತಿರುವ ಮತ್ತು 180 ಕೋಟಿ ರೂ. ವ್ಯಯ ಮಾಡಿ ಮಾಡಿರುವ ವರದಿಯನ್ನು ಬಿಡುಗಡೆ ಮಾಡಬೇಕಿದೆ. ಸರ್ಕಾರ ಮತ್ತು ಪ್ರತಿ ಪಕ್ಷಗಳು ವರದಿ ಬಿಡುಗಡೆಯಾದ ನಂತರ ಚರ್ಚೆಯಲ್ಲಿ ತೊಡಗಲಿ, ಬೇಕಿದ್ದರೆ ಆ ನಂತರ ಅದನ್ನು ತಿರಸ್ಕರಿಸಲಿ, ಇದಾಗದಿದ್ದಲ್ಲಿ ಎಲ್ಲ ವರದಿಗಳಿಗೆ ಅಂದರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸರ್ವೆಯ ವರದಿಗಳನ್ನು ಅಪಾರ್ಥ ಮಾಡಿದಂತಾಗುತ್ತದೆ. ಆ ವರದಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಜಾತಿ ಗಣತಿಯ ವರದಿ ಬಿಡುಗಡೆಯಾದರೆ ರವಿವರ್ಮ ಕುಮಾರ್, ದ್ವಾರಕನಾಥ್, ಜಯಪ್ರಕಾಶ್ ಇತರರ ಕಾಳಜಿಯಂತ ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಅನುಕೂಲವಾಗುತ್ತದೆ.

-ಮೋಹನ್ ಕುಮಾರ್ ಕೊಂಡಜ್ಜಿ, ವಿಧಾನ ಪರಿಷತ್ ಮಾಜಿ ಸದಸ್ಯ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago