Andolana originals

ಓದುಗರ ಪತ್ರ: ಜಾತಿ ಗಣತಿ ವರದಿ: ಬಿಡುಗಡೆಯ ನಂತರ ಚರ್ಚೆಯಾಗಲಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಮಾತನ್ನು ನಾನು ಒಪ್ಪುತ್ತೇನೆ. ನಾನು ಕರ್ನಾಟಕ ವಿಧಾನಪರಿಷತ್ ಸದಸ್ಯನಾಗಿದ್ದಾಗ ಬಿಜೆಪಿ ಸರ್ಕಾರಕ್ಕೆ ಒಂದು ಸ್ಪಷ್ಟನೆ ನೀಡಿದ್ದೆ. ಆ ಸಂದರ್ಭದಲ್ಲಿ ಕಾನೂನು ಸಚಿವರಾಗಿದ್ದ ಮಾಧುಸ್ವಾಮಿಯವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ಕಾಂತರಾಜು ಅಥವಾ ಸದಾಸಿದ ಕಮಿಟಿ ವರದಿ’ ಎಂಬ ಯಾವುದೇ ದಾಖಲೆಗಳು ಸರ್ಕಾರದಲ್ಲಿ ಇಲ್ಲ ಎಂದು ಹೇಳಿದ್ದರು. ಈ ಮಾತನ್ನು ಕೇಳಿದ ನನಗೆ ಸರ್ಕಾರಗಳು ಯಾವ ರೀತಿಯಾಗಿ ಆಡಳಿತ ನಡೆಸುತ್ತಿವೆ ಎಂಬ ಬಗ್ಗೆ ತಿಳಿದು ಆಘಾತವಾಯಿತು.

1931ರಲ್ಲಿ ಭಾರತದ ಜಾತಿಗಣತಿಯನ್ನು ಬ್ರಿಟಿಷ್ ಸರ್ಕಾರ ಮಾಡಿತ್ತು, ನಂತರ ಯಾವುದೇ ಸರ್ಕಾರಗಳು ಅದನ್ನು ಮಾಡಲಿಲ್ಲ. ಸಮಾಜವಾದಿ ಧುರೀಣ ದಿವಂಗತ ರಾಮ ಮನೋಹರ ಲೋಹಿಯಾ ಈ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಅವರ ಒತ್ತಾಯಕ್ಕೆ ಯಾರೂ ಓಗೊಡಲಿಲ್ಲ.

ಇದೀಗ ರಾಹುಲ್‌ ಗಾಂಧಿ ಮತ್ತು ಆರ್.ಎಸ್‌.ಎಸ್‌ನವರು ಕೂಡ ಜಾತಿಗಣತಿ ಆಗಬೇಕೆಂದು ಹೇಳಿದ್ದಾರೆ. ಕಾಂತರಾಜು ವರದಿ ಎಂದು ಬಿಂಬಿಸುತ್ತಿರುವ ಮತ್ತು 180 ಕೋಟಿ ರೂ. ವ್ಯಯ ಮಾಡಿ ಮಾಡಿರುವ ವರದಿಯನ್ನು ಬಿಡುಗಡೆ ಮಾಡಬೇಕಿದೆ. ಸರ್ಕಾರ ಮತ್ತು ಪ್ರತಿ ಪಕ್ಷಗಳು ವರದಿ ಬಿಡುಗಡೆಯಾದ ನಂತರ ಚರ್ಚೆಯಲ್ಲಿ ತೊಡಗಲಿ, ಬೇಕಿದ್ದರೆ ಆ ನಂತರ ಅದನ್ನು ತಿರಸ್ಕರಿಸಲಿ, ಇದಾಗದಿದ್ದಲ್ಲಿ ಎಲ್ಲ ವರದಿಗಳಿಗೆ ಅಂದರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸರ್ವೆಯ ವರದಿಗಳನ್ನು ಅಪಾರ್ಥ ಮಾಡಿದಂತಾಗುತ್ತದೆ. ಆ ವರದಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಜಾತಿ ಗಣತಿಯ ವರದಿ ಬಿಡುಗಡೆಯಾದರೆ ರವಿವರ್ಮ ಕುಮಾರ್, ದ್ವಾರಕನಾಥ್, ಜಯಪ್ರಕಾಶ್ ಇತರರ ಕಾಳಜಿಯಂತ ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಅನುಕೂಲವಾಗುತ್ತದೆ.

-ಮೋಹನ್ ಕುಮಾರ್ ಕೊಂಡಜ್ಜಿ, ವಿಧಾನ ಪರಿಷತ್ ಮಾಜಿ ಸದಸ್ಯ.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago