ಓದುಗರ ಪತ್ರ
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ
ಈ ಅಮಾನವೀಯ ಕ್ರೂರ ಕೃತ್ಯಕ್ಕೆ
ಇಡೀ ನಾಗರಿಕ ಸಮಾಜವೇ
ತಲೆ ತಗ್ಗಿಸುತ್ತಿದೆ
ತಾ ಹೆತ್ಹೊತ್ತು ತುತ್ತಿಟ್ಟ
ಕುಡಿಯ ಕಂಡು ಕರುಣೆಬಾರದಾಯಿತೆ!
‘ಮಾನ’ದೊಡ್ಡದಾಗಿ ಕೊಡಲಿ ಹಿಡಿದು,
ಹೆತ್ತಮಗಳ ಬದುಕಿಗೆ
ಕೊಳ್ಳಿಯಾಯಿತೆ
ಹೆತ್ತಕರುಳೆ ಕುಡಿಯ ಕೊಂದರೆ
ಮತ್ಯಾರನ್ನು ಕಾವಯೆಂದು ಕೂಗಲಿ
ಜಾತಿ, ಧರ್ಮ, ವಿಷದ ನಶೆಗೆ
ಮರ್ಯಾದೆಗೇಡು ಹತ್ಯೆಗಳು ನಿಲ್ಲಲಿ
ಜಾತಿಯೇ ತೊಲಗು
ಈ ಇಳೆಯಿಂದಾಚೆಗೆ…
ಜಾತಿ ಅಳಿಯಲಿ
ಜೀವ ಉಳಿಯಲಿ
(ಹುಬ್ಬಳ್ಳಿಯಲ್ಲಿ ಅನ್ಯ ಜಾತಿ ಯುವಕನ ಮದುವೆಯಾದ ಮಗಳನ್ನು , ತಂದೆಯೇ ಕೊಂದಿರುವ ಘಟನೆ ಹಿನ್ನೆಲೆಯಲ್ಲಿ ಬರೆದ ಕವನ)
-ಶಿವಣ್ಣ ಕಣೇನೂರು, ನಂಜನಗೂಡು ತಾಲ್ಲೂಕು
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…