ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ.
ಹಲವು ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ನದಿ ಪಾತ್ರದ ಹೊಲ-ಗದ್ದೆಗಳು, ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತಗೊಂಡಿವೆ. ಸಾಕಷ್ಟು ಕಡೆ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಗಳೂ ನೀರಿನಲ್ಲಿ ಮುಳುಗಿ ಹೋಗಿದ್ದು, ಅನೇಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇಂತಹ ಸಂದರ್ಭದಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವುದು ಅತ್ಯಗತ್ಯ.
ಆದರೆ ಕೆಲವರು ಪ್ರವಾಹದ ಸಂದರ್ಭದಲ್ಲಿಯೂ ಹುಚ್ಚು ಸಾಹಸಗಳನ್ನು ಮಾಡಲು ಹೋಗಿ ಅಪಾಯದಲ್ಲಿ ಸಿಲುಕಿಕೊಳ್ಳುತ್ತಾರೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದರೂ ಅದನ್ನು ಲೆಕ್ಕಿಸದೆ ವಾಹನ ಚಲಾಯಿಸುತ್ತಾರೆ. ಇನ್ನು ಕೆಲವರು ನದಿಗಿಳಿದು ಆಟವಾಡಲು ಹೋಗಿ ಅಥವಾ ನದಿಯ ಅಂಚಿನಲ್ಲಿ ನಿಂತು ಫೋಟೋ ತೆಗೆದುಕೊಳ್ಳಲು ಹೋಗಿ ನೀರುಪಾಲಾಗುವುದೂ ಉಂಟು. ಪ್ರವಾಹದ ಸಂದರ್ಭಗಳಲ್ಲಿ ಸಂಬಂಧಪಟ್ಟ ಇಲಾಖೆಯವರು, ಪೊಲೀಸರು, ಜಿಲ್ಲಾಡಳಿತದವರು ನದಿಪಾತ್ರದ ಜನರಿಗೆ ಒಂದಷ್ಟು ಸೂಚನೆಗಳನ್ನು ನೀಡಿರುತ್ತಾರೆ. ಮಾಧ್ಯಮಗಳೂ ಅವುಗಳನ್ನು ಬಿತ್ತರಿಸಿ ಜನರಲ್ಲಿ ಜಾಗೃತಿ ಮೂಡಿಸಿರುತ್ತವೆ. ಸಾರ್ವಜನಿಕರು ಆ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮೂಲಕ ಪ್ರವಾಹದ ಸಂದರ್ಭದಲ್ಲಿ ಜಾಗೃತಿ ವಹಿಸುವುದು ಒಳ್ಳೆಯದು.
-ಕಾಳಿಹುಂಡಿ ಶಿವಕುಮಾರ್, ಮೈಸೂರು.
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…