Andolana originals

ಓದುಗರ ಪತ್ರ| ನದಿ ಪಾತ್ರಗಳಲ್ಲಿ ಎಚ್ಚರಿಕೆ ಅಗತ್ಯ

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ.

ಹಲವು ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ನದಿ ಪಾತ್ರದ ಹೊಲ-ಗದ್ದೆಗಳು, ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತಗೊಂಡಿವೆ. ಸಾಕಷ್ಟು ಕಡೆ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಗಳೂ ನೀರಿನಲ್ಲಿ ಮುಳುಗಿ ಹೋಗಿದ್ದು, ಅನೇಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇಂತಹ ಸಂದರ್ಭದಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವುದು ಅತ್ಯಗತ್ಯ.

ಆದರೆ ಕೆಲವರು ಪ್ರವಾಹದ ಸಂದರ್ಭದಲ್ಲಿಯೂ ಹುಚ್ಚು ಸಾಹಸಗಳನ್ನು ಮಾಡಲು ಹೋಗಿ ಅಪಾಯದಲ್ಲಿ ಸಿಲುಕಿಕೊಳ್ಳುತ್ತಾರೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದರೂ ಅದನ್ನು ಲೆಕ್ಕಿಸದೆ ವಾಹನ ಚಲಾಯಿಸುತ್ತಾರೆ. ಇನ್ನು ಕೆಲವರು ನದಿಗಿಳಿದು ಆಟವಾಡಲು ಹೋಗಿ ಅಥವಾ ನದಿಯ ಅಂಚಿನಲ್ಲಿ ನಿಂತು ಫೋಟೋ ತೆಗೆದುಕೊಳ್ಳಲು ಹೋಗಿ ನೀರುಪಾಲಾಗುವುದೂ ಉಂಟು. ಪ್ರವಾಹದ ಸಂದರ್ಭಗಳಲ್ಲಿ ಸಂಬಂಧಪಟ್ಟ ಇಲಾಖೆಯವರು, ಪೊಲೀಸರು, ಜಿಲ್ಲಾಡಳಿತದವರು ನದಿಪಾತ್ರದ ಜನರಿಗೆ ಒಂದಷ್ಟು ಸೂಚನೆಗಳನ್ನು ನೀಡಿರುತ್ತಾರೆ. ಮಾಧ್ಯಮಗಳೂ ಅವುಗಳನ್ನು ಬಿತ್ತರಿಸಿ ಜನರಲ್ಲಿ ಜಾಗೃತಿ ಮೂಡಿಸಿರುತ್ತವೆ. ಸಾರ್ವಜನಿಕರು ಆ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮೂಲಕ ಪ್ರವಾಹದ ಸಂದರ್ಭದಲ್ಲಿ ಜಾಗೃತಿ ವಹಿಸುವುದು ಒಳ್ಳೆಯದು.
-ಕಾಳಿಹುಂಡಿ ಶಿವಕುಮಾರ್, ಮೈಸೂರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

6 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago