ಓದುಗರ ಪತ್ರ
೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ನಗರದ ಪ್ರಮುಖ ರಸ್ತೆಗಳು,ವೃತ್ತಗಳೂ ಸೇರಿದಂತೆ ಐತಿಹಾಸಿಕ, ಪಾರಂಪರಿಕ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದರ ಸೊಬಗನ್ನು ವೀಕ್ಷಿಸಲು ನಮ್ಮ ರಾಜ್ಯ,ದೇಶ – ವಿದೇಶಗಳಿಂದ ಜನರು ಆಗಮಿಸುತ್ತಾರೆ. ಕುಟುಂಬದ ಜೊತೆ ಮಕ್ಕಳೂ ಬರುತ್ತಾರೆ. ಯುವಕ-ಯುವತಿಯರು ಉತ್ಸಾಹದಲ್ಲಿ ಮೈಮರೆತು ದೀಪಾಲಂಕಾರದ ತೀರ ಸನಿಹ ಹೋದರೆ ಅನಾಹುತಗಳು ಸಂಭವಿಸುವ ಸಾಧ್ಯತೆಗಳೇ ಹೆಚ್ಚು.
ಮಕ್ಕಳ ಬಗ್ಗೆಯೂ ಎಚ್ಚರ ವಹಿಸಬೇಕು. ಆದ್ದರಿಂದ ದೀಪಾಲಂಕಾರವನ್ನು ಹತ್ತಿರದಿಂದ ನೋಡಿ ಆನಂದಿಸುವುದು ಒಳಿತು. ದೀಪಾಲಂಕಾರ ಮಾಡಿರುವ ಕಂಬಗಳು, ಮರಗಳ ಬಳಿ ಮಳೆಯಿಂದಾಗಿ ವಿದ್ಯುತ್ ಪ್ರವಹಿಸುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಪ್ರವಾಸಿಗರು ವಿದ್ಯುತ್ ದೀಪಗಳ ವೈರ್ಗಳನ್ನು ಮುಟ್ಟುವುದು, ಲೈಟಿಂಗ್ಸ್ಗಳನ್ನು ಮುಟ್ಟುವುದು ಅಥವಾ ಬಹಳ ಹತ್ತಿರ ಹೋಗಿ ಸೆಲಿ ತೆಗೆದುಕೊಳ್ಳುವುದು ಇನ್ನಿತರ ಸಾಹಸಗಳನ್ನು ಮಾಡುವಾಗ ಜಾಗ್ರತೆವಹಿಸುವುದು ಅಗತ್ಯ.
-ನಾಗೇಶ್, ಮಾನಸ ಗಂಗೋತ್ರಿ ಮೈಸೂರು
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…