ಓದುಗರ ಪತ್ರ
೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ನಗರದ ಪ್ರಮುಖ ರಸ್ತೆಗಳು,ವೃತ್ತಗಳೂ ಸೇರಿದಂತೆ ಐತಿಹಾಸಿಕ, ಪಾರಂಪರಿಕ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದರ ಸೊಬಗನ್ನು ವೀಕ್ಷಿಸಲು ನಮ್ಮ ರಾಜ್ಯ,ದೇಶ – ವಿದೇಶಗಳಿಂದ ಜನರು ಆಗಮಿಸುತ್ತಾರೆ. ಕುಟುಂಬದ ಜೊತೆ ಮಕ್ಕಳೂ ಬರುತ್ತಾರೆ. ಯುವಕ-ಯುವತಿಯರು ಉತ್ಸಾಹದಲ್ಲಿ ಮೈಮರೆತು ದೀಪಾಲಂಕಾರದ ತೀರ ಸನಿಹ ಹೋದರೆ ಅನಾಹುತಗಳು ಸಂಭವಿಸುವ ಸಾಧ್ಯತೆಗಳೇ ಹೆಚ್ಚು.
ಮಕ್ಕಳ ಬಗ್ಗೆಯೂ ಎಚ್ಚರ ವಹಿಸಬೇಕು. ಆದ್ದರಿಂದ ದೀಪಾಲಂಕಾರವನ್ನು ಹತ್ತಿರದಿಂದ ನೋಡಿ ಆನಂದಿಸುವುದು ಒಳಿತು. ದೀಪಾಲಂಕಾರ ಮಾಡಿರುವ ಕಂಬಗಳು, ಮರಗಳ ಬಳಿ ಮಳೆಯಿಂದಾಗಿ ವಿದ್ಯುತ್ ಪ್ರವಹಿಸುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಪ್ರವಾಸಿಗರು ವಿದ್ಯುತ್ ದೀಪಗಳ ವೈರ್ಗಳನ್ನು ಮುಟ್ಟುವುದು, ಲೈಟಿಂಗ್ಸ್ಗಳನ್ನು ಮುಟ್ಟುವುದು ಅಥವಾ ಬಹಳ ಹತ್ತಿರ ಹೋಗಿ ಸೆಲಿ ತೆಗೆದುಕೊಳ್ಳುವುದು ಇನ್ನಿತರ ಸಾಹಸಗಳನ್ನು ಮಾಡುವಾಗ ಜಾಗ್ರತೆವಹಿಸುವುದು ಅಗತ್ಯ.
-ನಾಗೇಶ್, ಮಾನಸ ಗಂಗೋತ್ರಿ ಮೈಸೂರು
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…