Andolana originals

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ ರೂಪಾಯಿಗೆ ಕೇವಲ ೧೩ ಪೈಸೆಯಷ್ಟು ಮಾತ್ರ ನೆರವು ನೀಡುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ.

ಕಳೆದ ಎರಡೂವರೆ ವರ್ಷಗಳಿಂದಲೂ, ಸಭೆಗಳಲ್ಲಿ, ಸದನದಲ್ಲಿ ಸಿದ್ದರಾಮಯ್ಯನವರು ಈ ಮಾತುಗಳನ್ನು ಹೇಳುತ್ತಿದ್ದಾರೆ. ಆದರೆ ನಮ್ಮ ಪಾಲಿನ ತೆರಿಗೆ ಪಡೆಯಲು ಇವರಾಗಲಿ, ಇವರ ಪಕ್ಷದ ಸಂಸದರಾಗಲಿ, ಇವರ ಸರ್ಕಾರದ ಅಧಿಕಾರಿಗಳಾಗಲಿ ಕೇಂದ್ರ ಸರ್ಕಾರ ದ ಮೇಲೆ ಹೆಚ್ಚಿನ ಒತ್ತಡ ಹೇರಿದ ನಿದರ್ಶನವಿಲ್ಲ. ಸರ್ಕಾರದ ದೆಹಲಿ ಪ್ರತಿನಿಧಿ ಏನು ಮಾಡುತ್ತಿದ್ದಾರೆ? ದೆಹಲಿ ಭವನದಲ್ಲಿರುವ ಕರ್ನಾಟಕದ ಅಧಿಕಾರಿಗಳು ಈ ಬಗ್ಗೆ ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ? ರಾಜ್ಯ ಸರ್ಕಾರ ಹಾಗೂ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಸಾಕಷ್ಟು ಅನುದಾನ ತಂದು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಾಗಿದೆ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

7 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

7 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

8 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago