ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ ರೂಪಾಯಿಗೆ ಕೇವಲ ೧೩ ಪೈಸೆಯಷ್ಟು ಮಾತ್ರ ನೆರವು ನೀಡುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ.
ಕಳೆದ ಎರಡೂವರೆ ವರ್ಷಗಳಿಂದಲೂ, ಸಭೆಗಳಲ್ಲಿ, ಸದನದಲ್ಲಿ ಸಿದ್ದರಾಮಯ್ಯನವರು ಈ ಮಾತುಗಳನ್ನು ಹೇಳುತ್ತಿದ್ದಾರೆ. ಆದರೆ ನಮ್ಮ ಪಾಲಿನ ತೆರಿಗೆ ಪಡೆಯಲು ಇವರಾಗಲಿ, ಇವರ ಪಕ್ಷದ ಸಂಸದರಾಗಲಿ, ಇವರ ಸರ್ಕಾರದ ಅಧಿಕಾರಿಗಳಾಗಲಿ ಕೇಂದ್ರ ಸರ್ಕಾರ ದ ಮೇಲೆ ಹೆಚ್ಚಿನ ಒತ್ತಡ ಹೇರಿದ ನಿದರ್ಶನವಿಲ್ಲ. ಸರ್ಕಾರದ ದೆಹಲಿ ಪ್ರತಿನಿಧಿ ಏನು ಮಾಡುತ್ತಿದ್ದಾರೆ? ದೆಹಲಿ ಭವನದಲ್ಲಿರುವ ಕರ್ನಾಟಕದ ಅಧಿಕಾರಿಗಳು ಈ ಬಗ್ಗೆ ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ? ರಾಜ್ಯ ಸರ್ಕಾರ ಹಾಗೂ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಸಾಕಷ್ಟು ಅನುದಾನ ತಂದು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಾಗಿದೆ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…