Andolana originals

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ ಕೊಲ್ಲಿ ರಾಷ್ಟ್ರಗಳಿಗೆ ತೆರಳಿರುವ ರಾಜಕಾರಣಿಗಳು, ಜನಪ್ರತಿನಿದಿಗಳು, ಗಣ್ಯರು ವಾಪಸ್ ಬರುವುದಕ್ಕೆ ವಿಮಾನ ಸೌಲಭ್ಯ ಸಿಗದೆ ಎಲ್ಲಿದ್ದಾರೋ ಅಲ್ಲಿಯೇ ಉಳಿಯುವಂತಹ ಸ್ಥಿತಿ ಎದುರಾಗಿದೆ. ಇವರನ್ನು ವಾಪಸ್ ತಾಯ್ನಾಡಿಗೆ ಕರೆತರುವ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ. ಆದರೆ, ದುಬೈನಲ್ಲಿ ಸಿಲುಕಿದ್ದ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರನ್ನು ಇತ್ತೀಚೆಗೆ ಭಾರತಕ್ಕೆ ವಾಪಸ್ ಕರೆತರಲಾಗಿದೆ. ಅವರು ತಮ್ಮನ್ನು ಹಿಂದಕ್ಕೆ ಕರೆತರುವುದರಲ್ಲಿ ಕೇಂದ್ರ ಸರ್ಕಾರ ಸಮರ್ಪಕವಾಗಿ ಸ್ಪಂದಿಸಲಿಲ್ಲ. ಬದಲಿಗೆ ದುಬೈ ಸರ್ಕಾರ, ಸ್ಥಳೀಯರು ಮತ್ತು ಕರ್ನಾಟಕ ಸರ್ಕಾರದವರು ನೆರವಾದರು ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯರ ಸ್ಥಿತಿಯೇ ಹೀಗಾದರೆ, ಇತರ ಜನರ ಪಾಡೇನಾಗಬೇಕು? ಕೇಂದ್ರ ಸರ್ಕಾರ ಇಂತಹ ಸಂದಿಗ್ಧತೆಯ ಸಂದರ್ಭದಲ್ಲಿ ತಾರತಮ್ಯ ಮಾಡದೆ, ಯುದ್ಧದ ದೆಸೆಯಿಂದ ವಾಪಸ್ ಬರಲಾಗದೆ ಪರಿತಪಿಸುತ್ತಿರುವ ಎಲ್ಲ ಭಾರತೀಯರನ್ನೂ ಒಂದೇ ಭಾವನೆಯಿಂದ ಗುರುತಿಸಿ, ತಾಯ್ನಾಡಿಗೆ ವಾಪಸ್ ಕರೆಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಕೊಲ್ಲಿ ರಾಷ್ಟ್ರಗಳಲ್ಲಿ ಉಳಿದಿರುವ ಭಾರತೀಯರನ್ನು ಕೂಡಲೇ ಹಿಂದಕ್ಕೆ ಕರೆಸಿಕೊಳ್ಳಲು ಆದ್ಯತೆ ಮೇರೆಗೆ ಕ್ರಮವಹಿಸಬೇಕು.

-ಜಿ.ಎಂ.ಪ್ರಕಾಶ್, ಗಾಂಧಿನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

5 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

5 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

5 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

5 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

5 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

6 hours ago