ಓದುಗರ ಪತ್ರ
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ ಕೊಲ್ಲಿ ರಾಷ್ಟ್ರಗಳಿಗೆ ತೆರಳಿರುವ ರಾಜಕಾರಣಿಗಳು, ಜನಪ್ರತಿನಿದಿಗಳು, ಗಣ್ಯರು ವಾಪಸ್ ಬರುವುದಕ್ಕೆ ವಿಮಾನ ಸೌಲಭ್ಯ ಸಿಗದೆ ಎಲ್ಲಿದ್ದಾರೋ ಅಲ್ಲಿಯೇ ಉಳಿಯುವಂತಹ ಸ್ಥಿತಿ ಎದುರಾಗಿದೆ. ಇವರನ್ನು ವಾಪಸ್ ತಾಯ್ನಾಡಿಗೆ ಕರೆತರುವ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ. ಆದರೆ, ದುಬೈನಲ್ಲಿ ಸಿಲುಕಿದ್ದ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರನ್ನು ಇತ್ತೀಚೆಗೆ ಭಾರತಕ್ಕೆ ವಾಪಸ್ ಕರೆತರಲಾಗಿದೆ. ಅವರು ತಮ್ಮನ್ನು ಹಿಂದಕ್ಕೆ ಕರೆತರುವುದರಲ್ಲಿ ಕೇಂದ್ರ ಸರ್ಕಾರ ಸಮರ್ಪಕವಾಗಿ ಸ್ಪಂದಿಸಲಿಲ್ಲ. ಬದಲಿಗೆ ದುಬೈ ಸರ್ಕಾರ, ಸ್ಥಳೀಯರು ಮತ್ತು ಕರ್ನಾಟಕ ಸರ್ಕಾರದವರು ನೆರವಾದರು ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯರ ಸ್ಥಿತಿಯೇ ಹೀಗಾದರೆ, ಇತರ ಜನರ ಪಾಡೇನಾಗಬೇಕು? ಕೇಂದ್ರ ಸರ್ಕಾರ ಇಂತಹ ಸಂದಿಗ್ಧತೆಯ ಸಂದರ್ಭದಲ್ಲಿ ತಾರತಮ್ಯ ಮಾಡದೆ, ಯುದ್ಧದ ದೆಸೆಯಿಂದ ವಾಪಸ್ ಬರಲಾಗದೆ ಪರಿತಪಿಸುತ್ತಿರುವ ಎಲ್ಲ ಭಾರತೀಯರನ್ನೂ ಒಂದೇ ಭಾವನೆಯಿಂದ ಗುರುತಿಸಿ, ತಾಯ್ನಾಡಿಗೆ ವಾಪಸ್ ಕರೆಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಕೊಲ್ಲಿ ರಾಷ್ಟ್ರಗಳಲ್ಲಿ ಉಳಿದಿರುವ ಭಾರತೀಯರನ್ನು ಕೂಡಲೇ ಹಿಂದಕ್ಕೆ ಕರೆಸಿಕೊಳ್ಳಲು ಆದ್ಯತೆ ಮೇರೆಗೆ ಕ್ರಮವಹಿಸಬೇಕು.
-ಜಿ.ಎಂ.ಪ್ರಕಾಶ್, ಗಾಂಧಿನಗರ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…