Andolana originals

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ ಸಹಾಯದಿಂದ ಪೈಪ್ ಅಳವಡಿಸುತ್ತಿದ್ದಾರೆ. ಕಾಮಗಾರಿ ನಡೆಸುವ ಗುತ್ತಿಗೆ ಪಡೆದಿರುವವರು ಉತ್ತರ ಭಾರತದವರಾಗಿದ್ದು, ಅವರಿಗೆ ಕನ್ನಡ ಭಾಷೆ ತಿಳಿಯುತ್ತಿಲ್ಲ. ಅವರು ಎಲ್ಲೆಂದರಲ್ಲಿ ಅಗೆದು ಹಾಗೇ ಬಿಡುತ್ತಿದ್ದಾರೆ. ಪುಟ್ಟ ಮಕ್ಕಳು ಹಳ್ಳಕ್ಕೆ ಬೀಳುವ ಸಾಧ್ಯತೆಯಿರುತ್ತದೆ ಹಾಗೂ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಬಡಾವಣೆಯ ಕೆಲವು ನಿವಾಸಿಗಳು ಮನೆಯ ಮುಂದೆ ಹಾಕಿಸಿದ್ದ ಕಾಂಕ್ರಿಟ್‌ನ್ನೂ ಅಗೆದು ಹಾಳು ಮಾಡಿದ್ದಲ್ಲದೇ ನೀರಿನ ಪೈಪುಗಳಿವೆಯೇ, ಗ್ಯಾಸ್ ಪೈಪ್ ಲೈನ್ ಮತ್ತು ವಿದ್ಯುತ್ ಕೇಬಲ್‌ಗಳಿವೆಯೇಎಂಬುದನ್ನು ಅರಿಯದೇ, ಕೆಲವು ಸಂದರ್ಭಗಳಲ್ಲಿ ತಿಳಿಸಿದ್ದರೂ ಉಡಾಫೆಯಾಗಿ ವರ್ತಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುತ್ತಿದ್ದಾರೆ. ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್‌ನ ಮನೆಯ ಮುಂದೆ ಹಳ್ಳ ತೆಗೆದಿದ್ದು, ಅಲ್ಲಿನ ನೀರಿನ ಪೈಪು ಒಡೆದು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೇಬಲ್ ಅಳವಡಿಕೆ ಕಾಮಗಾರಿಗೂ ಮುನ್ನ ನಿವಾಸಿಗಳನ್ನು ಸಂಪರ್ಕಿಸಿ, ಗ್ಯಾಸ್, ನೀರು, ವಿದ್ಯುತ್ ಕೇಬಲ್ ಎಲ್ಲಿ ಹೋಗಿದೆ ಎಂಬುದನ್ನು ಖಚಿತಪಡಿಸಿಕೊಂಡು, ಯಾರಿಗೂ ತೊಂದರೆಯಾಗದಂತೆ ಕಾರ್ಯನಿರ್ವಹಿಸುವುದು ಅವಶ್ಯ.

 -ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

5 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

6 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

6 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

7 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

7 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

7 hours ago