Andolana originals

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ ಸಹಾಯದಿಂದ ಪೈಪ್ ಅಳವಡಿಸುತ್ತಿದ್ದಾರೆ. ಕಾಮಗಾರಿ ನಡೆಸುವ ಗುತ್ತಿಗೆ ಪಡೆದಿರುವವರು ಉತ್ತರ ಭಾರತದವರಾಗಿದ್ದು, ಅವರಿಗೆ ಕನ್ನಡ ಭಾಷೆ ತಿಳಿಯುತ್ತಿಲ್ಲ. ಅವರು ಎಲ್ಲೆಂದರಲ್ಲಿ ಅಗೆದು ಹಾಗೇ ಬಿಡುತ್ತಿದ್ದಾರೆ. ಪುಟ್ಟ ಮಕ್ಕಳು ಹಳ್ಳಕ್ಕೆ ಬೀಳುವ ಸಾಧ್ಯತೆಯಿರುತ್ತದೆ ಹಾಗೂ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಬಡಾವಣೆಯ ಕೆಲವು ನಿವಾಸಿಗಳು ಮನೆಯ ಮುಂದೆ ಹಾಕಿಸಿದ್ದ ಕಾಂಕ್ರಿಟ್‌ನ್ನೂ ಅಗೆದು ಹಾಳು ಮಾಡಿದ್ದಲ್ಲದೇ ನೀರಿನ ಪೈಪುಗಳಿವೆಯೇ, ಗ್ಯಾಸ್ ಪೈಪ್ ಲೈನ್ ಮತ್ತು ವಿದ್ಯುತ್ ಕೇಬಲ್‌ಗಳಿವೆಯೇಎಂಬುದನ್ನು ಅರಿಯದೇ, ಕೆಲವು ಸಂದರ್ಭಗಳಲ್ಲಿ ತಿಳಿಸಿದ್ದರೂ ಉಡಾಫೆಯಾಗಿ ವರ್ತಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುತ್ತಿದ್ದಾರೆ. ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್‌ನ ಮನೆಯ ಮುಂದೆ ಹಳ್ಳ ತೆಗೆದಿದ್ದು, ಅಲ್ಲಿನ ನೀರಿನ ಪೈಪು ಒಡೆದು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೇಬಲ್ ಅಳವಡಿಕೆ ಕಾಮಗಾರಿಗೂ ಮುನ್ನ ನಿವಾಸಿಗಳನ್ನು ಸಂಪರ್ಕಿಸಿ, ಗ್ಯಾಸ್, ನೀರು, ವಿದ್ಯುತ್ ಕೇಬಲ್ ಎಲ್ಲಿ ಹೋಗಿದೆ ಎಂಬುದನ್ನು ಖಚಿತಪಡಿಸಿಕೊಂಡು, ಯಾರಿಗೂ ತೊಂದರೆಯಾಗದಂತೆ ಕಾರ್ಯನಿರ್ವಹಿಸುವುದು ಅವಶ್ಯ.

 -ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

51 mins ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

2 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

2 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

11 hours ago